ಸ್ವಾಮೀಜಿ ಬೆಂಗಾವಲು ಪೊಲೀಸ್ ವಾಹನವು ವೇಗವಾಗಿ ಸೈರನ್ ಮೊಳಗಿಸಿಕೊಂಡು ಹೋಗುತ್ತಿದ್ದಾಗ ಶಿರಾಲಿ ಹೆದ್ದಾರಿಯಲ್ಲಿ ಮಹಿಳೆಯು ಏಕಾಏಕಿ ರಸ್ತೆ ದಾಟಲು ಮುಂದಾದರು. ವಾಹನ ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ, ಚಿಕಿತ್ಸೆಗೆ ಸ್ಪಂದಿಸಿದೆ ಮೃತಪಟ್ಟರು ಎಂದು ಪೊಲೀಸರು ತಿಳಿಸಿದ್ದಾರೆ.