ಆರೋಪಿಯು ಮೀನುಗಾರಿಕಾ ದೋಣಿಯಲ್ಲಿ ಕೆಲಸ ಮಾಡುತ್ತಿದ್ದರು. ಯಾವ ಉದ್ದೇಶಕ್ಕಾಗಿ ಕೊಲೆ ಮಾಡಲಾಗಿದೆ ಎಂದು ಗೊತ್ತಾಗಿಲ್ಲ. ಕೊಲೆಯಾದ ವ್ಯಕ್ತಿಯ ಮಗಳು ಘಟನೆಯ ಪ್ರತ್ಯಕ್ಷ ಸಾಕ್ಷಿಯಾಗಿದ್ದು, ಅವರ ಪ್ರಕಾರ ಇಬ್ಬರಲ್ಲೂ ಮಾತಿನ ಚಕಮಕಿ ನಡೆದಿತ್ತು. ಆಗ ಆರೋಪಿಯು ಏಕಾಏಕಿ ಕಬ್ಬಿಣದ ರಾಡ್ನಿಂದ ವಿವೇಕಾನಂದ ಅವರ ತಲೆಯ ಮೇಲೆ ಹೊಡೆದರು. ನಂತರ ತನಗೂ ಜೀವ ಬೆದರಿಕೆ ನೀಡಿ ಮನೆಯಿಂದ ಓಡಿ ಹೋದರು ಎಂದು ತಿಳಿಸಿದ್ದಾರೆ.