‘ಒಂದೂವರೆ ವರ್ಷದ ಹಿಂದೆ ಇಲ್ಲಿ ಗ್ರಿಡ್ ಅಳವಡಿಸುವಾಗಲೇ ನಾವು ಆಕ್ಷೇಪ ವ್ಯಕ್ತಪಡಿಸಿದ್ದೆವು.ಅದಕ್ಕೆ ಹೆಸ್ಕಾಂ ಅಧಿಕಾರಿಗಳು ಏನೇ ಸಮಸ್ಯೆಯಾದರೂ ನಾವು ಬಗೆಹರಿಸುತ್ತೇವೆ ಎಂದಿದ್ದರು. ಅದಾದ ಬಳಿಕ ಮೂರು ಸಲ ತಂತಿ ತುಂಡಾಗಿ ಬಿದ್ದಿದೆ. ಅದೃಷ್ಟವಶಾತ್ ಅದರ ಕೆಳಗೆ ಯಾರೂ ಇರಲಿಲ್ಲ. ಒಂದುವೇಳೆ, ಏನಾದರೂ ಅಪಾಯವಾದರೆ ಯಾರು ಹೊಣೆಯಾಗುತ್ತಾರೆ? ಅಧಿಕಾರಿಗಳು ಸರಿಯಾಗಿ ಸ್ಪಂದಿಸುತ್ತಿಲ್ಲ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.