ತಾಲ್ಲೂಕಿನ ಗಡಿಭಾಗದ ಕಾನಸೂರು ಬಾಳೇಕೈ ನಿವಾಸಿ ಗೀತಾ ಗಣಪತಿ ನಾಯ್ಕ ಸೋಮವಾರ ಹಳೆಯ ಮನೆಯನ್ನು ಕೆಡವಿ, ಹೊಸ ಮನೆಯನ್ನು ಕಟ್ಟಲು ಸಿದ್ಧತೆ ನಡೆಸಿದ್ದರು. ಆ ಸಂದರ್ಭದಲ್ಲಿ ಸ್ಥಳಕ್ಕೆ ಭೇಟಿ ನೀಡಿದ ಅರಣ್ಯ ಇಲಾಖೆ ಸಿಬ್ಬಂದಿ, ಆಕೆಯನ್ನು ಬಂಧಿಸಿ ಕರೆ ತಂದಿದ್ದಾರೆ. ಆಕೆಗೆ ಸರಿಯಾಗಿ ಊಟ–ತಿಂಡಿ ನೀಡದೇ, ಮಾನಸಿಕ ಕಿರುಕುಳ ನೀಡಿದ್ದಾರೆ ಎಂದು ಗೀತಾ ಕುಟುಂಬಸ್ಥರು ತಿಳಿಸಿದ್ದಾರೆ.