ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊರೊನಾ ವೈರಸ್ ಸೋಂಕು ತಡೆಗಟ್ಟಲು ಮಂಜುಗುಣಿಯಲ್ಲಿ ಪ್ರವೇಶ ನಿರ್ಬಂಧ

Last Updated 21 ಮಾರ್ಚ್ 2020, 13:44 IST
ಅಕ್ಷರ ಗಾತ್ರ

ಶಿರಸಿ: ಕೊರೊನಾ ವೈರಸ್ ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ತಾಲ್ಲೂಕಿನ ಮಂಜುಗುಣಿ ವೆಂಕಟರಮಣ ದೇವಸ್ಥಾನದಲ್ಲಿ ಭಕ್ತರ ಪ್ರವೇಶ ನಿರ್ಬಂಧಿಸಲಾಗಿದೆ. ಏ.2ರಿಂದ 9ರವರೆಗೆ ನಡೆಯಲಿದ್ದ ದೇವರ ರಥೋತ್ಸವ ಕಾರ್ಯಕ್ರಮಗಳನ್ನು ಸಹ ಸರ್ಕಾರದ ಆದೇಶದ ಮೇರೆಗೆ ಮುಂದೂಡಲಾಗಿದೆ.

ಮುಂದಿನ ಆದೇಶದವರೆಗೆ ದೇವಸ್ಥಾನದಲ್ಲಿ ವಿಶೇಷ ಪೂಜೆ, ಪುನಸ್ಕಾರ ಹಾಗೂ ಸೇವೆಗಳಿಗೆ ಅವಕಾಶವಿಲ್ಲ. ನಿತ್ಯ ಮಧ್ಯಾಹ್ನದ ಪ್ರಸಾದ ಭೋಜನ ವ್ಯವಸ್ಥೆಯನ್ನು ತಾತ್ಕಾಲಿಕವಾಗಿ ನಿಲ್ಲಿಸಲಾಗಿದೆ. ಏ.8ರ ಬ್ರಹ್ಮರಥೋತ್ಸವ ವೇಳೆಗೆ ಹರಕೆ ರೂಪದಲ್ಲಿ ಭಕ್ತರು ಸಲ್ಲಿಸುತ್ತಿದ್ದ ಸೇವೆಗಳಾದ ಮಹಾರಥಕ್ಕೆ ಸಲ್ಲಿಸುವ ಕಾಯಿ, ಕಬ್ಬು, ಅಡಿಕೆ ಕೊನೆಗಳು, ತರಕಾರಿ ಹಾಗೂ ನಾರಾಯಣ ಭೂತರಾಜನಿಗೆ ನೀಡುತ್ತಿದ್ದ ಕಾಯಿ, ರಥಾರೂಢ ವೆಂಕಟರಮಣ ದೇವರ ಪಾದದಡಿಯಲ್ಲಿ ಶಿಶುಗಳನ್ನು ಮಲಗಿಸುವ, ದೇವಸ್ಥಾನಕ್ಕೆ ಸಮರ್ಪಿಸುವ ರಥಗಾಣಿಕೆ ಹಾಗೂ ಇನ್ನಿತರ ಸೇವೆಗಳಿಗೆ ಕೆಲ ದಿನಗಳ ನಂತರ ಅವಕಾಶ ಮಾಡಿಕೊಡಲಾಗುತ್ತದೆ ಎಂದು ದೇವಾಲಯದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT