ಬನವಾಸಿಯಲ್ಲಿ ಹೊಸ ಉಪಕೇಂದ್ರ ನಿರ್ಮಿಸಿರುವ ಸಂಬಂಧ ಸರ್ಕಾರದಿಂದ ಅನುಮತಿ ದೊರೆತು, 2012ರಲ್ಲಿ ರಾಜ್ಯ ಅರಣ್ಯ ಇಲಾಖೆ ಕಡಕೋಡದಲ್ಲಿ ಒಂದು ಹೆಕ್ಟೇರ್ ಅರಣ್ಯ ಭೂಮಿ ಮಂಜೂರು ಮಾಡಿತ್ತು. ಆ ಸಂದರ್ಭದಲ್ಲಿ ಚಂದ್ರಗುತ್ತಿಯಿಂದ ಯೋಜಿತ ಉಪಕೇಂದ್ರಕ್ಕೆ ಲೈನ್ ಎಳೆಯುವ ಯೋಜನೆ ರೂಪಿಸಲಾಗಿತ್ತು. ಆದರೆ, ಕಾಮಗಾರಿ ಆರಂಭಿಸುವಲ್ಲಿ ವಿಳಂಬವಾಯಿತು. ಇದೇ ಸಂದರ್ಭದಲ್ಲಿ ಉಪ ಕೇಂದ್ರ ನಿರ್ಮಾಣಕ್ಕೆ ಒಂದು ಹೆಕ್ಟೇರ್ ಹಾಗೂ ಲೈನ್ ಎಳೆಯಲು ಹೆಚ್ಚುವರಿ ಜಾಗ ಬೇಕಾಗಿರುವ ಕಾರಣ, ಕೇಂದ್ರ ಅರಣ್ಯ ಪರಿಸರ ಮಂತ್ರಾಲಯವು, ರಾಜ್ಯ ಅರಣ್ಯ ಇಲಾಖೆಗೆ ಜಾಗ ಮಂಜೂರು ಅಧಿಕಾರ ಇಲ್ಲವೆಂದು ಹೇಳಿ, ವಾಪಸ್ ಪಡೆಯುವಂತೆ ಆದೇಶಿಸಿತು. 2018 ಜನವರಿಯಲ್ಲಿ ಅರಣ್ಯ ಇಲಾಖೆ ಜಾಗ ವಾಪಸ್ ಪಡೆದ ಮೇಲೆ, ₹ 10.29 ಕೋಟಿ ವೆಚ್ಚದ ಉಪ ಕೇಂದ್ರ ನಿರ್ಮಾಣ ಯೋಜನೆ ನನೆಗುದಿಗೆ ಬಿದ್ದಿದೆ.