'ವೃತ್ತಿಯಲ್ಲಿ ಕೃಷಿಕರಾಗಿರುವ ಇವರು ಕಳೆದ ಆರೇಳು ವರ್ಷಗಳಿಂದ ವಿದ್ಯಾರ್ಥಿಗಳಲ್ಲಿ ದೇಶಪ್ರೇಮ ಬೆಳೆಸುವ ಕೆಲಸವನ್ನು ವಿಶಿಷ್ಟವಾಗಿ ಮಾಡುತ್ತಿದ್ದಾರೆ. ಗಣರಾಜ್ಯೋತ್ಸವ ಹಾಗೂ ಸ್ವಾತಂತ್ರ್ಯೋತ್ಸವದಂದು, ತಮ್ಮ ಬೈಕಿಗೆ ತ್ರಿವರ್ಣ ಧ್ವಜಗಳನ್ನು ಕಟ್ಟಿಕೊಂಡು ಸಂಚರಿಸುತ್ತಾರೆ. ವಿದ್ಯಾರ್ಥಿಗಳಿಗೆ ಸಿಹಿ ಹಂಚುತ್ತಾರೆ. ಕೆಲವು ವಿದ್ಯಾರ್ಥಿಗಳಿಗೆ ಬಟ್ಟೆ, ಬ್ಯಾಗ್ ಸಹ ಕೊಡಿಸುತ್ತಾರೆ' ಎಂದು ಗ್ರಾಮಸ್ಥರು ಹೇಳುತ್ತಾರೆ.