ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಾಲದ ಹೊರೆ: ರೈತ ಆತ್ಮಹತ್ಯೆ

Last Updated 9 ಮಾರ್ಚ್ 2022, 16:10 IST
ಅಕ್ಷರ ಗಾತ್ರ

ಶಿರಸಿ: ಸಾಲದ ಹೊರೆಗೆ ಹೆದರಿ ತಾಲ್ಲೂಕಿನ ಭಾಶಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ನರೂರು ಗ್ರಾಮದ ರೈತರೊಬ್ಬರು ಮನೆ ಪಕ್ಕದ ಕೊಟ್ಟಿಗೆಯಲ್ಲಿ ಬುಧವಾರ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ನಾಗೇಂದ್ರ ಕನ್ನಪ್ಪ ನಾಯ್ಕ (50) ಮೃತರು.

‘ಸ್ಥಳೀಯ ವ್ಯವಸಾಯ ಸೇವಾ ಸಹಕಾರ ಸಂಘದಲ್ಲಿ ₹98 ಸಾವಿರ ಸಾಲ ಪಡೆದು ಭತ್ತ ಬೆಳೆದಿದ್ದರು. ಕುಟುಂಬಕ್ಕೆ ₹1.20 ಲಕ್ಷ ಹಳೆಯ ಸಾಲವಿತ್ತು. ನುಸಿ ರೋಗದಿಂದ ಈ ಬಾರಿ ಬೆಳೆ ಹಾಳಾಗಿತ್ತು. ಇದರಿಂದ ಮನನೊಂದಿದ್ದರು. ಸಾಲ ಮರುಪಾವತಿಯ ಚಿಂತೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ’ ಎಂದು ಮೃತರ ಕುಟುಂಬ ಪೊಲೀಸರಿಗೆ ಸಲ್ಲಿಸಿದ ದೂರಿನಲ್ಲಿ ತಿಳಿಸಿದೆ. ಬನವಾಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT