<p>ಶಿರಸಿ: ‘ವರದಾ ನದಿ ಪ್ರವಾಹ, ನಿರಂತರ ಮಳೆಯಿಂದ ನೂರಾರು ಹೆಕ್ಟೇರ್ ಬೆಳೆ ಕಳೆದುಕೊಂಡಿರುವ ಬನವಾಸಿ ಭಾಗದ ರೈತರ ಸಾಲಮನ್ನಾ ಮಾಡಲು ಸರ್ಕಾರ ವಿಶೇಷ ನಿರ್ಣಯ ಕೈಗೊಳ್ಳಬೇಕು’ ಎಂಬ ಆಗ್ರಹ ಬನವಾಸಿ ಹೋಬಳಿಯ ಹಲವು ರೈತರಿಂದ ವ್ಯಕ್ತವಾಯಿತು.</p>.<p>ಬನವಾಸಿಯ ಅಂಬೇಡ್ಕರ ಭವನದಲ್ಲಿ ಕಾರ್ಯನಿರತ ಪತ್ರಕರ್ತರ ಸಂಘದ ತಾಲ್ಲೂಕು ಘಟಕದ ವತಿಯಿಂದ ಶುಕ್ರವಾರ ಆಯೋಜಿಸಲಾಗಿದ್ದ ಕೃಷಿ, ತೋಟಗಾರಿಕಾ ಇಲಾಖೆ ಅಧಿಕಾರಿಗಳ ಜತೆ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ರೈತರು ತಮ್ಮ ಸಮಸ್ಯೆಗಳನ್ನು ತೆರೆದಿಟ್ಟರು.</p>.<p>‘ಬನವಾಸಿ ಹೋಬಳಿಯಲ್ಲಿ ನೂರಾರು ಹೆಕ್ಟೇರ್ ಬೆಳೆಗಳಿಗೆ ಹಾನಿ ಉಂಟಾಗಿದೆ. ಸರ್ಕಾರ ಅತ್ಯಲ್ಪ ಪರಿಹಾರದ ಬದಲು ಸಮರ್ಪಕ ಪರಿಹಾರ ಒದಗಿಸಬೇಕು’ ಎಂದು ರೈತ ಮುಖಂಡ ಸಿ.ಎಫ್.ನಾಯ್ಕ ಒತ್ತಾಯಿಸಿದರು.</p>.<p>ರೈತ ಭದ್ರಾ ಗೌಡ, ‘ಬದನಗೋಡ ವ್ಯಾಪ್ತಿಯಲ್ಲಿ ಬಾಳೆ ಬೆಳೆ ಸಂಪೂರ್ಣ ನಾಶವಾಗಿದೆ. ಇದುವರೆಗೂ ಪರಿಹಾರ ಸಿಕ್ಕಿಲ್ಲ. ಅಧಿಕಾರಿಗಳು ಸಮೀಕ್ಷೆ ಮುಗಿದಿಲ್ಲ ಎನ್ನುತ್ತಿದ್ದಾರೆ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.</p>.<p>ಭಾಶಿ ಗ್ರಾಮ ಪಂಚಾಯ್ತಿ ಸದಸ್ಯ ವಿನಯ ಗೌಡರ್, ‘ಶುಂಠಿ ಕೊಳೆ ಜೋರಾಗಿದೆ. ನೆರೆ ಪರಿಹಾರ ಪ್ರತಿ ಎಕರೆಗೆ ₹3800 ಮಾತ್ರ ನೀಡಲಾಗುತ್ತಿದೆ. ಮರು ಬಿತ್ತನೆ ಮಾಡಲೂ ರೈತರಿಗೆ ಆಗುತ್ತಿಲ್ಲ’ ಎಂದರು.</p>.<p>ಕೃಷಿ ಇಲಾಖೆ ಉಪ ನಿರ್ದೇಶಕ ಟಿ.ಎಚ್.ನಟರಾಜ, ‘ಕಳೆದ ಐದು ವರ್ಷಗಳ ಸರಾಸರಿ ಮಳೆ, ಹಾನಿ ಆಧರಿಸಿ ಬೆಳೆ ವಿಮೆ ನೀಡಲಾಗುತ್ತದೆ. ರೈತರು ಬೆಳೆ ವಿಮೆ ಸೌಲಭ್ಯ ಪಡೆದುಕೊಳ್ಳಲು ಮುಂದಾಗಬೇಕು’ ಎಂದರು.</p>.<p>ತೋಟಗಾರಿಕೆ ಇಲಾಖೆ ಉಪನಿರ್ದೇಶಕ ಬಿ.ಪಿ.ಸತೀಶ್, ‘ಬೆಳೆ ಹಾನಿಯ ಪರಿಹಾರವನ್ನು ಸರ್ಕಾರ ಪರಿಷ್ಕರಿಸಿದ್ದು, ಪ್ರತಿ ಹೆಕ್ಟೇರ್ ತೋಟಗಾರಿಕೆ ಬೆಳೆ ನಷ್ಟಕ್ಕೆ ₹ 28 ಸಾವಿರ ಪರಿಹಾರ ನೀಡಲಾಗುತ್ತಿದೆ’ ಎಂದರು.</p>.<p>ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಮಧುಕರ ನಾಯ್ಕ, ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ ಗಣೇಶ್ ಹೆಗಡೆ ಇದ್ದರು.ಪತ್ರಕರ್ತರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಸಂದೇಶ ಭಟ್, ಕಾರ್ಯದರ್ಶಿ ಕೃಷ್ಣಮೂರ್ತಿ ಕೆರೆಗದ್ದೆ ಇದ್ದರು. ರಾಘವೇಂದ್ರ ಬೆಟ್ಕೊಪ್ಪ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಶಿರಸಿ: ‘ವರದಾ ನದಿ ಪ್ರವಾಹ, ನಿರಂತರ ಮಳೆಯಿಂದ ನೂರಾರು ಹೆಕ್ಟೇರ್ ಬೆಳೆ ಕಳೆದುಕೊಂಡಿರುವ ಬನವಾಸಿ ಭಾಗದ ರೈತರ ಸಾಲಮನ್ನಾ ಮಾಡಲು ಸರ್ಕಾರ ವಿಶೇಷ ನಿರ್ಣಯ ಕೈಗೊಳ್ಳಬೇಕು’ ಎಂಬ ಆಗ್ರಹ ಬನವಾಸಿ ಹೋಬಳಿಯ ಹಲವು ರೈತರಿಂದ ವ್ಯಕ್ತವಾಯಿತು.</p>.<p>ಬನವಾಸಿಯ ಅಂಬೇಡ್ಕರ ಭವನದಲ್ಲಿ ಕಾರ್ಯನಿರತ ಪತ್ರಕರ್ತರ ಸಂಘದ ತಾಲ್ಲೂಕು ಘಟಕದ ವತಿಯಿಂದ ಶುಕ್ರವಾರ ಆಯೋಜಿಸಲಾಗಿದ್ದ ಕೃಷಿ, ತೋಟಗಾರಿಕಾ ಇಲಾಖೆ ಅಧಿಕಾರಿಗಳ ಜತೆ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ರೈತರು ತಮ್ಮ ಸಮಸ್ಯೆಗಳನ್ನು ತೆರೆದಿಟ್ಟರು.</p>.<p>‘ಬನವಾಸಿ ಹೋಬಳಿಯಲ್ಲಿ ನೂರಾರು ಹೆಕ್ಟೇರ್ ಬೆಳೆಗಳಿಗೆ ಹಾನಿ ಉಂಟಾಗಿದೆ. ಸರ್ಕಾರ ಅತ್ಯಲ್ಪ ಪರಿಹಾರದ ಬದಲು ಸಮರ್ಪಕ ಪರಿಹಾರ ಒದಗಿಸಬೇಕು’ ಎಂದು ರೈತ ಮುಖಂಡ ಸಿ.ಎಫ್.ನಾಯ್ಕ ಒತ್ತಾಯಿಸಿದರು.</p>.<p>ರೈತ ಭದ್ರಾ ಗೌಡ, ‘ಬದನಗೋಡ ವ್ಯಾಪ್ತಿಯಲ್ಲಿ ಬಾಳೆ ಬೆಳೆ ಸಂಪೂರ್ಣ ನಾಶವಾಗಿದೆ. ಇದುವರೆಗೂ ಪರಿಹಾರ ಸಿಕ್ಕಿಲ್ಲ. ಅಧಿಕಾರಿಗಳು ಸಮೀಕ್ಷೆ ಮುಗಿದಿಲ್ಲ ಎನ್ನುತ್ತಿದ್ದಾರೆ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.</p>.<p>ಭಾಶಿ ಗ್ರಾಮ ಪಂಚಾಯ್ತಿ ಸದಸ್ಯ ವಿನಯ ಗೌಡರ್, ‘ಶುಂಠಿ ಕೊಳೆ ಜೋರಾಗಿದೆ. ನೆರೆ ಪರಿಹಾರ ಪ್ರತಿ ಎಕರೆಗೆ ₹3800 ಮಾತ್ರ ನೀಡಲಾಗುತ್ತಿದೆ. ಮರು ಬಿತ್ತನೆ ಮಾಡಲೂ ರೈತರಿಗೆ ಆಗುತ್ತಿಲ್ಲ’ ಎಂದರು.</p>.<p>ಕೃಷಿ ಇಲಾಖೆ ಉಪ ನಿರ್ದೇಶಕ ಟಿ.ಎಚ್.ನಟರಾಜ, ‘ಕಳೆದ ಐದು ವರ್ಷಗಳ ಸರಾಸರಿ ಮಳೆ, ಹಾನಿ ಆಧರಿಸಿ ಬೆಳೆ ವಿಮೆ ನೀಡಲಾಗುತ್ತದೆ. ರೈತರು ಬೆಳೆ ವಿಮೆ ಸೌಲಭ್ಯ ಪಡೆದುಕೊಳ್ಳಲು ಮುಂದಾಗಬೇಕು’ ಎಂದರು.</p>.<p>ತೋಟಗಾರಿಕೆ ಇಲಾಖೆ ಉಪನಿರ್ದೇಶಕ ಬಿ.ಪಿ.ಸತೀಶ್, ‘ಬೆಳೆ ಹಾನಿಯ ಪರಿಹಾರವನ್ನು ಸರ್ಕಾರ ಪರಿಷ್ಕರಿಸಿದ್ದು, ಪ್ರತಿ ಹೆಕ್ಟೇರ್ ತೋಟಗಾರಿಕೆ ಬೆಳೆ ನಷ್ಟಕ್ಕೆ ₹ 28 ಸಾವಿರ ಪರಿಹಾರ ನೀಡಲಾಗುತ್ತಿದೆ’ ಎಂದರು.</p>.<p>ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಮಧುಕರ ನಾಯ್ಕ, ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ ಗಣೇಶ್ ಹೆಗಡೆ ಇದ್ದರು.ಪತ್ರಕರ್ತರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಸಂದೇಶ ಭಟ್, ಕಾರ್ಯದರ್ಶಿ ಕೃಷ್ಣಮೂರ್ತಿ ಕೆರೆಗದ್ದೆ ಇದ್ದರು. ರಾಘವೇಂದ್ರ ಬೆಟ್ಕೊಪ್ಪ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>