ಇದು ಜಿಲ್ಲೆಯಲ್ಲಿ ಮೆಕ್ಕೆಜೋಳ ಬೆಳೆದವರು ಪ್ರಸ್ತುತ ಎದುರಿಸುತ್ತಿರುವ ಸಮಸ್ಯೆ. ಹಳಿಯಾಳ, ಮುಂಡಗೋಡ, ಶಿರಸಿ ಹಾಗೂ ಯಲ್ಲಾಪುರ ತಾಲ್ಲೂಕುಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮೆಕ್ಕೆಜೋಳ ಬೆಳೆಯಲಾಗುತ್ತದೆ. ಸರ್ಕಾರವು ಈ ಬಾರಿ ಪ್ರತಿ ಕ್ವಿಂಟಲ್ ಫಸಲಿಗೆ ₹ 1,780 ಬೆಂಬಲ ಬೆಲೆ ಘೋಷಿಸಿದೆ. ಆದರೆ, ಜಿಲ್ಲೆಯಲ್ಲಿ ಖರೀದಿ ಕೇಂದ್ರವೇ ಇಲ್ಲ. ಇದರ ದುರ್ಲಾಭ ಪಡೆಯುತ್ತಿರುವ ಮಧ್ಯವರ್ತಿಗಳು, ಕಡಿಮೆ ದರಕ್ಕೆ ಖರೀದಿಸುತ್ತಿದ್ದಾರೆ ಎಂಬುದು ರೈತರ ಅಳಲು.