<p><strong>ಕಾರವಾರ:</strong> ಜಿಲ್ಲೆಯಲ್ಲಿ ಮತ್ತೆ51 ಮಂದಿಗೆ ಕೋವಿಡ್ 19 ದೃಢಪಟ್ಟಿರುವುದು ಆರೋಗ್ಯ ಇಲಾಖೆಯಗುರುವಾರದ ಬುಲೆಟಿನ್ನಲ್ಲಿ ತಿಳಿದುಬಂದಿದೆ. ಈ ಪೈಕಿ ಹಳಿಯಾಳ ಮತ್ತು ದಾಂಡೇಲಿ ತಾಲ್ಲೂಕುಗಳಲ್ಲಿ ಒಟ್ಟು 17,ಶಿರಸಿ ತಾಲ್ಲೂಕಿನಲ್ಲಿ 12 ಮಂದಿಗೆ ಸೋಂಕು ಖಚಿತವಾಗಿದೆ.</p>.<p>ಅದೇರೀತಿ, ಭಟ್ಕಳ ತಾಲ್ಲೂಕಿನಲ್ಲಿ ಎಂಟು ಜನರಿಗೆ ಸೋಂಕು ಕಾಣಿಸಿಕೊಂಡಿದೆ. ಅಂಕೋಲಾ ತಾಲ್ಲೂಕಿನಲ್ಲಿ ಐವರಿಗೆ, ಮುಂಡಗೋಡ ತಾಲ್ಲೂಕಿನಲ್ಲಿ ನಾಲ್ವರು, ಯಲ್ಲಾಪುರ ತಾಲ್ಲೂಕಿನಲ್ಲಿ ಇಬ್ಬರಿಗೆ,ಸಿದ್ದಾಪುರ, ಕಾರವಾರ ಹಾಗೂ ಹೊನ್ನಾವರ ತಾಲ್ಲೂಕಿನಲ್ಲಿ ತಲಾ ಒಬ್ಬರು ಸೋಂಕಿತರಾಗಿದ್ದಾರೆ.</p>.<p>ಈಗಾಗಲೇ ಸೋಂಕಿತರಾದವರ ಸಂಪರ್ಕಕ್ಕೆ ಬಂದ ಮತ್ತಷ್ಟು ಮಂದಿಯೇ ಹೊಸದಾಗಿ ಸೋಂಕಿತರಾಗಿದ್ದಾರೆ. ಅವರಲ್ಲಿ ಕೆಲವರಿಗೆ ತೀವ್ರ ಉಸಿರಾಟದ ಸಮಸ್ಯೆಯಿದೆ(ಎಸ್.ಎ.ಆರ್.ಐ) ಎಂದು ಬುಲೆಟಿನ್ನಲ್ಲಿ ಉಲ್ಲೇಖಿಸಲಾಗಿದೆ.ಅಂತೆಯೇ ಕೆಲವರಿಗೆ ಜ್ವರದ (ಐ.ಎಲ್.ಐ) ಲಕ್ಷಣಗಳೂ ಇವೆ. ಆರು ಮಂದಿ ದೇಶದ ಒಳಗೆ ಪ್ರಯಾಣಿಸಿದ ಹಿನ್ನೆಲೆಯನ್ನೂ ಹೊಂದಿದ್ದಾರೆ.</p>.<p class="Subhead"><strong>ಸೋಂಕಿನ ಮೂಲ ತಿಳಿದಿಲ್ಲ:</strong>ಗುರುವಾರ ದೃಢಪಟ್ಟ ಪ್ರಕರಣಗಳಲ್ಲಿ 15ಕ್ಕೂ ಅಧಿಕ ಮಂದಿಗೆ ಸೋಂಕು ಎಲ್ಲಿಂದ ಬಂತು ಎಂಬುದು ಖಚಿತವಾಗಿಲ್ಲ. ಈ ಬಗ್ಗೆ ಆರೋಗ್ಯ ಇಲಾಖೆ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಈ ರೀತಿಯ ಪ್ರಕರಣಗಳು ಕೆಲವು ದಿನಗಳಿಂದ ಹೆಚ್ಚುತ್ತಿರುವುದು ಇಲಾಖೆಯ ಸಿಬ್ಬಂದಿಗೂ ಸವಾಲಾಗಿ ಪರಿಣಮಿಸುತ್ತಿವೆ.</p>.<p class="Subhead"><strong>ಇಬ್ಬರ ಸಾವು:</strong> ಇತರ ಕಾಯಿಲೆಗಳಿಗೆ ಚಿಕಿತ್ಸೆ ಪಡೆಯುತ್ತಿದ್ದ ಇಬ್ಬರು ರೋಗಿಗಳು ಮೃತಪಟ್ಟಿದ್ದಾರೆ. ಅವರಲ್ಲಿ ಕೋವಿಡ್ 19 ಇರುವುದು ಗುರುವಾರ ದೃಢಪಟ್ಟಿದೆ.</p>.<p class="Subhead">ಅವರಲ್ಲಿ ಒಬ್ಬರಾದ ಅಂಕೋಲಾದ ಕ್ಯಾನ್ಸರ್ ರೋಗಿಯೊಬ್ಬರು ಜುಲೈ 13ರಂದು ಮಣಿಪಾಲದ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು. ಮೃತದೇಹದ ಗಂಟಲುದ್ರವದ ಪರೀಕ್ಷೆ ಮಾಡಿದಾಗ ಕೋವಿಡ್ ದೃಢಪಟ್ಟಿದೆ.</p>.<p>ಡಯಾಲಿಸಿಸ್ ಮಾಡಿಸಿಕೊಳ್ಳುತ್ತಿದ್ದ ಭಟ್ಕಳದ ರೋಗಿಯೊಬ್ಬರುಪಟ್ಟಣದ ತಾಲ್ಲೂಕು ಆಸ್ಪತ್ರೆಯಲ್ಲಿಮೃತಪಟ್ಟಿದ್ದಾರೆ. ಅವರಿಗೂಕೋವಿಡ್ ಖಚಿತವಾಗಿದೆ ಎಂದು ಮೂಲಗಳು ತಿಳಿಸಿವೆ.</p>.<p class="Subhead"><strong>ಎಂಟು ಮಂದಿ ಗುಣಮುಖ:</strong>ಕೋವಿಡ್ 19ನಿಂದ ಗುಣಮುಖರಾದ ಎಂಟು ಮಂದಿಯನ್ನು ಕಾರವಾರದ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ವಿಶೇಷ ವಾರ್ಡ್ನಿಂದ ಗುರುವಾರ ಬಿಡುಗಡೆ ಮಾಡಲಾಯಿತು.</p>.<p>ಅವರಲ್ಲಿ ಕಾರವಾರ ತಾಲ್ಲೂಕಿನ ಆರು ಮಂದಿ, ದಾಂಡೇಲಿಮತ್ತುಶಿರಸಿ ತಾಲ್ಲೂಕುಗಳ ತಲಾ ಒಬ್ಬರು ಸೇರಿದ್ದಾರೆ. ಅವರನ್ನು ಸಂಸ್ಥೆಯ ನಿರ್ದೇಶಕ ಡಾ.ಗಜಾನನ ನಾಯಕ, ಜಿಲ್ಲಾ ಸರ್ಜನ್ ಡಾ.ಶಿವಾನಂದ ಕುಡ್ತರಕರ್ ಹಾಗೂ ಸಿಬ್ಬಂದಿ ಶುಭ ಹಾರೈಸಿ ಬೀಳ್ಕೊಟ್ಟರು.</p>.<p>825ಒಟ್ಟು ಸೋಂಕಿತರು</p>.<p>499ಸಕ್ರಿಯ ಪ್ರಕರಣಗಳು</p>.<p>316ಗುಣಮುಖರಾದವರು</p>.<p>10ಮೃತರು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾರವಾರ:</strong> ಜಿಲ್ಲೆಯಲ್ಲಿ ಮತ್ತೆ51 ಮಂದಿಗೆ ಕೋವಿಡ್ 19 ದೃಢಪಟ್ಟಿರುವುದು ಆರೋಗ್ಯ ಇಲಾಖೆಯಗುರುವಾರದ ಬುಲೆಟಿನ್ನಲ್ಲಿ ತಿಳಿದುಬಂದಿದೆ. ಈ ಪೈಕಿ ಹಳಿಯಾಳ ಮತ್ತು ದಾಂಡೇಲಿ ತಾಲ್ಲೂಕುಗಳಲ್ಲಿ ಒಟ್ಟು 17,ಶಿರಸಿ ತಾಲ್ಲೂಕಿನಲ್ಲಿ 12 ಮಂದಿಗೆ ಸೋಂಕು ಖಚಿತವಾಗಿದೆ.</p>.<p>ಅದೇರೀತಿ, ಭಟ್ಕಳ ತಾಲ್ಲೂಕಿನಲ್ಲಿ ಎಂಟು ಜನರಿಗೆ ಸೋಂಕು ಕಾಣಿಸಿಕೊಂಡಿದೆ. ಅಂಕೋಲಾ ತಾಲ್ಲೂಕಿನಲ್ಲಿ ಐವರಿಗೆ, ಮುಂಡಗೋಡ ತಾಲ್ಲೂಕಿನಲ್ಲಿ ನಾಲ್ವರು, ಯಲ್ಲಾಪುರ ತಾಲ್ಲೂಕಿನಲ್ಲಿ ಇಬ್ಬರಿಗೆ,ಸಿದ್ದಾಪುರ, ಕಾರವಾರ ಹಾಗೂ ಹೊನ್ನಾವರ ತಾಲ್ಲೂಕಿನಲ್ಲಿ ತಲಾ ಒಬ್ಬರು ಸೋಂಕಿತರಾಗಿದ್ದಾರೆ.</p>.<p>ಈಗಾಗಲೇ ಸೋಂಕಿತರಾದವರ ಸಂಪರ್ಕಕ್ಕೆ ಬಂದ ಮತ್ತಷ್ಟು ಮಂದಿಯೇ ಹೊಸದಾಗಿ ಸೋಂಕಿತರಾಗಿದ್ದಾರೆ. ಅವರಲ್ಲಿ ಕೆಲವರಿಗೆ ತೀವ್ರ ಉಸಿರಾಟದ ಸಮಸ್ಯೆಯಿದೆ(ಎಸ್.ಎ.ಆರ್.ಐ) ಎಂದು ಬುಲೆಟಿನ್ನಲ್ಲಿ ಉಲ್ಲೇಖಿಸಲಾಗಿದೆ.ಅಂತೆಯೇ ಕೆಲವರಿಗೆ ಜ್ವರದ (ಐ.ಎಲ್.ಐ) ಲಕ್ಷಣಗಳೂ ಇವೆ. ಆರು ಮಂದಿ ದೇಶದ ಒಳಗೆ ಪ್ರಯಾಣಿಸಿದ ಹಿನ್ನೆಲೆಯನ್ನೂ ಹೊಂದಿದ್ದಾರೆ.</p>.<p class="Subhead"><strong>ಸೋಂಕಿನ ಮೂಲ ತಿಳಿದಿಲ್ಲ:</strong>ಗುರುವಾರ ದೃಢಪಟ್ಟ ಪ್ರಕರಣಗಳಲ್ಲಿ 15ಕ್ಕೂ ಅಧಿಕ ಮಂದಿಗೆ ಸೋಂಕು ಎಲ್ಲಿಂದ ಬಂತು ಎಂಬುದು ಖಚಿತವಾಗಿಲ್ಲ. ಈ ಬಗ್ಗೆ ಆರೋಗ್ಯ ಇಲಾಖೆ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಈ ರೀತಿಯ ಪ್ರಕರಣಗಳು ಕೆಲವು ದಿನಗಳಿಂದ ಹೆಚ್ಚುತ್ತಿರುವುದು ಇಲಾಖೆಯ ಸಿಬ್ಬಂದಿಗೂ ಸವಾಲಾಗಿ ಪರಿಣಮಿಸುತ್ತಿವೆ.</p>.<p class="Subhead"><strong>ಇಬ್ಬರ ಸಾವು:</strong> ಇತರ ಕಾಯಿಲೆಗಳಿಗೆ ಚಿಕಿತ್ಸೆ ಪಡೆಯುತ್ತಿದ್ದ ಇಬ್ಬರು ರೋಗಿಗಳು ಮೃತಪಟ್ಟಿದ್ದಾರೆ. ಅವರಲ್ಲಿ ಕೋವಿಡ್ 19 ಇರುವುದು ಗುರುವಾರ ದೃಢಪಟ್ಟಿದೆ.</p>.<p class="Subhead">ಅವರಲ್ಲಿ ಒಬ್ಬರಾದ ಅಂಕೋಲಾದ ಕ್ಯಾನ್ಸರ್ ರೋಗಿಯೊಬ್ಬರು ಜುಲೈ 13ರಂದು ಮಣಿಪಾಲದ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು. ಮೃತದೇಹದ ಗಂಟಲುದ್ರವದ ಪರೀಕ್ಷೆ ಮಾಡಿದಾಗ ಕೋವಿಡ್ ದೃಢಪಟ್ಟಿದೆ.</p>.<p>ಡಯಾಲಿಸಿಸ್ ಮಾಡಿಸಿಕೊಳ್ಳುತ್ತಿದ್ದ ಭಟ್ಕಳದ ರೋಗಿಯೊಬ್ಬರುಪಟ್ಟಣದ ತಾಲ್ಲೂಕು ಆಸ್ಪತ್ರೆಯಲ್ಲಿಮೃತಪಟ್ಟಿದ್ದಾರೆ. ಅವರಿಗೂಕೋವಿಡ್ ಖಚಿತವಾಗಿದೆ ಎಂದು ಮೂಲಗಳು ತಿಳಿಸಿವೆ.</p>.<p class="Subhead"><strong>ಎಂಟು ಮಂದಿ ಗುಣಮುಖ:</strong>ಕೋವಿಡ್ 19ನಿಂದ ಗುಣಮುಖರಾದ ಎಂಟು ಮಂದಿಯನ್ನು ಕಾರವಾರದ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ವಿಶೇಷ ವಾರ್ಡ್ನಿಂದ ಗುರುವಾರ ಬಿಡುಗಡೆ ಮಾಡಲಾಯಿತು.</p>.<p>ಅವರಲ್ಲಿ ಕಾರವಾರ ತಾಲ್ಲೂಕಿನ ಆರು ಮಂದಿ, ದಾಂಡೇಲಿಮತ್ತುಶಿರಸಿ ತಾಲ್ಲೂಕುಗಳ ತಲಾ ಒಬ್ಬರು ಸೇರಿದ್ದಾರೆ. ಅವರನ್ನು ಸಂಸ್ಥೆಯ ನಿರ್ದೇಶಕ ಡಾ.ಗಜಾನನ ನಾಯಕ, ಜಿಲ್ಲಾ ಸರ್ಜನ್ ಡಾ.ಶಿವಾನಂದ ಕುಡ್ತರಕರ್ ಹಾಗೂ ಸಿಬ್ಬಂದಿ ಶುಭ ಹಾರೈಸಿ ಬೀಳ್ಕೊಟ್ಟರು.</p>.<p>825ಒಟ್ಟು ಸೋಂಕಿತರು</p>.<p>499ಸಕ್ರಿಯ ಪ್ರಕರಣಗಳು</p>.<p>316ಗುಣಮುಖರಾದವರು</p>.<p>10ಮೃತರು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>