2019ರ ಫೆ.11ರಿಂದ 2022ರ ಏಪ್ರಿಲ್ ಅವಧಿಯಲ್ಲಿ, ಬ್ಯಾಂಕಿನ ಗ್ರಾಹಕರೊಂದಿಗೆ ಒಳಸಂಚು ಮಾಡಿಕೊಂಡು ಬ್ಯಾಂಕಿನ ‘ಸಿಸ್ಟಮ್ ಸಸ್ಪೆನ್ಸ್’ ಖಾತೆಗೆ ₹ 1.50 ಕೋಟಿ ಖರ್ಚು ತೋರಿಸಿದ್ದಾರೆ. ಆ ಹಣವನ್ನು ಬ್ಯಾಂಕಿನ ಗ್ರಾಹಕರ ಖಾತೆಗೆ ಜಮೆ ಮಾಡಿ ದುರುಪಯೋಗ ಪಡಿಸಿಕೊಂಡು ಮೋಸ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಅವರ ವಿರುದ್ಧ ಪ್ರಸ್ತುತ ಬಝಾರ್ ಶಾಖೆಯ ವ್ಯವಸ್ಥಾಪಕ ರಾಘವೇಂದ್ರ ಅವರು ಪೊಲೀಸರಿಗೆ ದೂರು ನೀಡಿದ್ದಾರೆ.