ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೈದರ್ ಘಾಟ್‌ನಲ್ಲಿ ಹುಲ್ಲಿಗೆ ಬೆಂಕಿ

Last Updated 4 ಮಾರ್ಚ್ 2021, 15:38 IST
ಅಕ್ಷರ ಗಾತ್ರ

ಕಾರವಾರ: ತಾಲ್ಲೂಕಿನ ಶಿರವಾಡ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೈದರ್ ಘಾಟ್‌ ಅರಣ್ಯ ಪ್ರದೇಶದಲ್ಲಿ ಹುಲ್ಲಿಗೆ ಕಿಡಿಗೇಡಿಗಳು ಗುರುವಾರ ಬೆಂಕಿ ಹಚ್ಚಿದ್ದಾರೆ. ಅರಣ್ಯ ಇಲಾಖೆ ಸಿಬ್ಬಂದಿ ಹರಸಾಹಸ ಪಟ್ಟು ಬೆಂಕಿಯನ್ನು ನಂದಿಸಿ ಹೆಚ್ಚಿನ ಅಪಾಯ ತಪ್ಪಿಸಿದರು.

ಒಣ ಹುಲ್ಲಿಗೆ ತಗುಲಿದ ಬೆಂಕಿಯು, ಗಾಳಿಯಿಂದಾಗಿ ತರಗೆಲೆಗಳಿಗೆ ಹರಡಿತ್ತು. ಬಳಿಕ ಅರಣ್ಯ ಪ್ರದೇಶವನ್ನು ವ್ಯಾಪಿಸಿತ್ತು. ಈ ಭಾಗದಲ್ಲಿ ಅತ್ಯಮೂಲ್ಯ ಸಸ್ಯ ಸಂಪತ್ತು ಹಾಗೂ ವನ್ಯಜೀವಿಗಳಿವೆ. ಬೆಂಕಿಯ ಪ್ರಮಾಣ ಮತ್ತಷ್ಟು ಹೆಚ್ಚುತ್ತಿದ್ದರೆ ಅವುಗಳಿಗೆ ಅಪಾಯವಾಗುವ ಸಾಧ್ಯತೆಯಿತ್ತು. ತಕ್ಷಣ ಸ್ಥಳಕ್ಕೆ ಬಂದ ಅರಣ್ಯ ಇಲಾಖೆ ಸಿಬ್ಬಂದಿ ಸಂಜೀವ ಅಸ್ನೋಟಿಕರ ಹಾಗೂ ಶಶಿಕಾಂತ ಬೆಂಕಿಯನ್ನು ಆರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT