ಆ ಸಂದರ್ಭದಲ್ಲಿ, ‘ಮೀನು ಮಾರುಕಟ್ಟೆಯ ಇಡೀ ಕಟ್ಟಡದಲ್ಲಿ ಮೀನುಗಾರ ಮಹಿಳೆಯರಿಗೆ ಕೂರಲು ಅವಕಾಶ ಮಾಡಿಕೊಡಲಾಗುವುದು’ ಎಂದು ಬರೆಯಲಾದ ಪತ್ರವೊಂದನ್ನು ತೋರಿಸಲಾಗಿದೆ. ಆದರೆ, ನ್ಯಾಯಾಲಯದಲ್ಲಿ ನಗರಸಭೆಯಿಂದ ಬೇರೆಯದೇ ರೀತಿ ಇರುವ ಅಫಿಡವಿಟ್ ಸಲ್ಲಿಕೆಯಾಗಿದೆ. ಕಟ್ಟಡದ ಅರ್ಧ ಭಾಗ ಮಾತ್ರ ಮೀನುಗಾರರ ಮಹಿಳೆಯರಿಗೆ ಹಾಗೂ ಇನ್ನರ್ಧ ವಾಣಿಜ್ಯ ಮಳಿಗೆಗಳಿಗೆ ನೀಡಲಾಗುವುದು ಎಂದು ತಿಳಿಸಲಾಗಿದೆ. ನಗರಸಭೆ ಅಧಿಕಾರಿಗಳು ದ್ವಂದ್ವ ನೀತಿ ಅನುಸರಿಸುತ್ತಿದ್ದಾರೆ’ ಎಂದು ಪ್ರತಿಭಟನಾಕಾರರು ದೂರಿದರು.