<p><strong>ಕಾರವಾರ:</strong> ಸಾಗರಮಾಲಾ ಯೋಜನೆಯಡಿ ಇಲ್ಲಿನ ರವೀಂದ್ರನಾಥ ಟ್ಯಾಗೋರ್ ಕಡಲತೀರದಲ್ಲಿ ಅಲೆ ತಡೆಗೋಡೆ ನಿರ್ಮಾಣ ಮಾಡುವುದಕ್ಕೆ ಮೀನುಗಾರರ ವಿರೋಧ ಮುಂದುವರಿದಿದೆ. ಯೋಜನೆಯನ್ನು ರದ್ದು ಪಡಿಸುವಂತೆ ಒತ್ತಾಯಿಸಿ ಪ್ರಧಾನಮಂತ್ರಿಗೆ ಪತ್ರ ಬರೆಯುವ ಚಳವಳಿಗೆ ಶುಕ್ರವಾರ ಚಾಲನೆ ನೀಡಿದರು.</p>.<p>ನಗರದ ಕೇಂದ್ರ ಅಂಚೆ ಕಚೇರಿ ಬಳಿ ಸೇರಿದ ಮೀನುಗಾರರು, ಸರ್ಕಾರವು ಅಲೆ ತಡೆಗೋಡೆ ನಿರ್ಮಾಣವನ್ನು ಕೈಬಿಡುವವರೆಗೂ ಹೋರಾಟ ಮುಂದುವರಿಯಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ.</p>.<p>‘ನಮ್ಮ ಕಡಲತೀರವನ್ನು ಉಳಿಸಿಕೊಳ್ಳಲು ನಮಗೆ ಹೋರಾಟ ಅನಿವಾರ್ಯವಾಗಿದೆ. ನಮ್ಮ ಹಕ್ಕುಗಳನ್ನು ರಕ್ಷಿಸಿಕೊಳ್ಳಲು ಈ ಯೋಜನೆಯನ್ನು ಬಿಡಬೇಕು ಎಂದು ಆಗ್ರಹಿಸುತ್ತಿದ್ದೇವೆ’ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.</p>.<p>‘ಬಾಲ್ಯದಿಂದಲೂ ಕಾರವಾರದಲ್ಲಿ ವಾಸವಿರುವ ನಾವು, ಸರ್ಕಾರದಿಂದ ಆಗುತ್ತಿರುವ ಅನ್ಯಾಯ ಹಾಗೂ ದೌರ್ಜನ್ಯವನ್ನು ಕಣ್ಣಾರೆ ಕಂಡಿದ್ದೇವೆ. ಕಡಲ ನಗರಿ ಎಂದು ಕರೆಯಿಸಿಕೊಳ್ಳುವ ಕಾರವಾರದಲ್ಲಿ ಈ ಹಿಂದೆ ಹತ್ತಾರು ಕಡಲತೀರಗಳು ಮುಕ್ತವಾಗಿದ್ದವು. ಆದರೆ, ಸೀಬರ್ಡ್ ನೌಕಾನೆಲೆಯ ಸ್ಥಾಪನೆಯಾದಾಗ ರವೀಂದ್ರನಾಥ ಟ್ಯಾಗೋರ್ ಕಡಲತೀರ ಮಾತ್ರ ಉಳಿದುಕೊಂಡಿತು. ಈಗ ಬಂದರು ವಿಸ್ತರಣೆಗಾಗಿ ಅದನ್ನೂ ವಶಪಡಿಸಿಕೊಂಡರೆ ಜನರಿಗೆ ಕಡಲತೀರವೇ ಇಲ್ಲದಂತಾಗುತ್ತದೆ’ ಎಂದು ಪತ್ರದಲ್ಲಿ ತಿಳಿಸಿದ್ದಾರೆ.</p>.<p>‘ಬಂದರು ವಿಸ್ತರಣೆಯ ನೆಪದಲ್ಲಿ ಕಾಮಗಾರಿ ಆರಂಭಿಸಲು ಮುಂದಾದಾಗ ಮೀನುಗಾರರೆಲ್ಲರೂ ಹೋರಾಡಿದ್ದೆವು. ಕಾಮಗಾರಿಯನ್ನು ನಿಲ್ಲಿಸಿದ್ದೆವು. ಮುಂದಿನ ದಿನಗಳಲ್ಲೂ ಯೋಜನೆಯನ್ನು ಮುಂದುವರಿಸಬಾರದು’ ಎಂದು ಒತ್ತಾಯಿಸಿದ್ದಾರೆ.</p>.<p>ಪತ್ರಗಳನ್ನು ಕನ್ನಡ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ಬರೆಯಲಾಗಿದೆ. ಹಂತ ಹಂತವಾಗಿ 500ಕ್ಕೂ ಹೆಚ್ಚು ಪತ್ರಗಳನ್ನು ಪ್ರಧಾನಮಂತ್ರಿಯ ಕಚೇರಿ ವಿಳಾಸಕ್ಕೆ ಅಂಚೆ ಮೂಲಕ ರವಾನಿಸುವ ಉದ್ದೇಶ ಹೊಂದಲಾಗಿದೆ ಎಂದು ಬೈತಖೋಲ್ನ ಮೀನುಗಾರ ಮುಖಂಡ ವಿನಾಯಕ ಹರಿಕಂತ್ರ ತಿಳಿಸಿದರು.</p>.<p>ಈ ಸಂದರ್ಭದಲ್ಲಿ ಚಿತ್ತಾಕುಲಾ ಗ್ರಾಮ ಪಂಚಾಯ್ತಿ ಮಾಜಿ ಅಧ್ಯಕ್ಷ ರಾಜು ತಾಂಡೇಲ ಸೇರಿದಂತೆ ಹಲವು ಪ್ರಮುಖರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾರವಾರ:</strong> ಸಾಗರಮಾಲಾ ಯೋಜನೆಯಡಿ ಇಲ್ಲಿನ ರವೀಂದ್ರನಾಥ ಟ್ಯಾಗೋರ್ ಕಡಲತೀರದಲ್ಲಿ ಅಲೆ ತಡೆಗೋಡೆ ನಿರ್ಮಾಣ ಮಾಡುವುದಕ್ಕೆ ಮೀನುಗಾರರ ವಿರೋಧ ಮುಂದುವರಿದಿದೆ. ಯೋಜನೆಯನ್ನು ರದ್ದು ಪಡಿಸುವಂತೆ ಒತ್ತಾಯಿಸಿ ಪ್ರಧಾನಮಂತ್ರಿಗೆ ಪತ್ರ ಬರೆಯುವ ಚಳವಳಿಗೆ ಶುಕ್ರವಾರ ಚಾಲನೆ ನೀಡಿದರು.</p>.<p>ನಗರದ ಕೇಂದ್ರ ಅಂಚೆ ಕಚೇರಿ ಬಳಿ ಸೇರಿದ ಮೀನುಗಾರರು, ಸರ್ಕಾರವು ಅಲೆ ತಡೆಗೋಡೆ ನಿರ್ಮಾಣವನ್ನು ಕೈಬಿಡುವವರೆಗೂ ಹೋರಾಟ ಮುಂದುವರಿಯಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ.</p>.<p>‘ನಮ್ಮ ಕಡಲತೀರವನ್ನು ಉಳಿಸಿಕೊಳ್ಳಲು ನಮಗೆ ಹೋರಾಟ ಅನಿವಾರ್ಯವಾಗಿದೆ. ನಮ್ಮ ಹಕ್ಕುಗಳನ್ನು ರಕ್ಷಿಸಿಕೊಳ್ಳಲು ಈ ಯೋಜನೆಯನ್ನು ಬಿಡಬೇಕು ಎಂದು ಆಗ್ರಹಿಸುತ್ತಿದ್ದೇವೆ’ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.</p>.<p>‘ಬಾಲ್ಯದಿಂದಲೂ ಕಾರವಾರದಲ್ಲಿ ವಾಸವಿರುವ ನಾವು, ಸರ್ಕಾರದಿಂದ ಆಗುತ್ತಿರುವ ಅನ್ಯಾಯ ಹಾಗೂ ದೌರ್ಜನ್ಯವನ್ನು ಕಣ್ಣಾರೆ ಕಂಡಿದ್ದೇವೆ. ಕಡಲ ನಗರಿ ಎಂದು ಕರೆಯಿಸಿಕೊಳ್ಳುವ ಕಾರವಾರದಲ್ಲಿ ಈ ಹಿಂದೆ ಹತ್ತಾರು ಕಡಲತೀರಗಳು ಮುಕ್ತವಾಗಿದ್ದವು. ಆದರೆ, ಸೀಬರ್ಡ್ ನೌಕಾನೆಲೆಯ ಸ್ಥಾಪನೆಯಾದಾಗ ರವೀಂದ್ರನಾಥ ಟ್ಯಾಗೋರ್ ಕಡಲತೀರ ಮಾತ್ರ ಉಳಿದುಕೊಂಡಿತು. ಈಗ ಬಂದರು ವಿಸ್ತರಣೆಗಾಗಿ ಅದನ್ನೂ ವಶಪಡಿಸಿಕೊಂಡರೆ ಜನರಿಗೆ ಕಡಲತೀರವೇ ಇಲ್ಲದಂತಾಗುತ್ತದೆ’ ಎಂದು ಪತ್ರದಲ್ಲಿ ತಿಳಿಸಿದ್ದಾರೆ.</p>.<p>‘ಬಂದರು ವಿಸ್ತರಣೆಯ ನೆಪದಲ್ಲಿ ಕಾಮಗಾರಿ ಆರಂಭಿಸಲು ಮುಂದಾದಾಗ ಮೀನುಗಾರರೆಲ್ಲರೂ ಹೋರಾಡಿದ್ದೆವು. ಕಾಮಗಾರಿಯನ್ನು ನಿಲ್ಲಿಸಿದ್ದೆವು. ಮುಂದಿನ ದಿನಗಳಲ್ಲೂ ಯೋಜನೆಯನ್ನು ಮುಂದುವರಿಸಬಾರದು’ ಎಂದು ಒತ್ತಾಯಿಸಿದ್ದಾರೆ.</p>.<p>ಪತ್ರಗಳನ್ನು ಕನ್ನಡ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ಬರೆಯಲಾಗಿದೆ. ಹಂತ ಹಂತವಾಗಿ 500ಕ್ಕೂ ಹೆಚ್ಚು ಪತ್ರಗಳನ್ನು ಪ್ರಧಾನಮಂತ್ರಿಯ ಕಚೇರಿ ವಿಳಾಸಕ್ಕೆ ಅಂಚೆ ಮೂಲಕ ರವಾನಿಸುವ ಉದ್ದೇಶ ಹೊಂದಲಾಗಿದೆ ಎಂದು ಬೈತಖೋಲ್ನ ಮೀನುಗಾರ ಮುಖಂಡ ವಿನಾಯಕ ಹರಿಕಂತ್ರ ತಿಳಿಸಿದರು.</p>.<p>ಈ ಸಂದರ್ಭದಲ್ಲಿ ಚಿತ್ತಾಕುಲಾ ಗ್ರಾಮ ಪಂಚಾಯ್ತಿ ಮಾಜಿ ಅಧ್ಯಕ್ಷ ರಾಜು ತಾಂಡೇಲ ಸೇರಿದಂತೆ ಹಲವು ಪ್ರಮುಖರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>