ಹೂಳೆತ್ತಲು ಬಜೆಟ್ನಲ್ಲಿ ಅನುದಾನ ಘೋಷಿಸುವಂತೆ ಭಟ್ಕಳ ಮೀನುಗಾರರು ಶಾಸಕ ಸುನೀಲ ನಾಯ್ಕ ನೇತೃತ್ವದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಆಗ್ರಹಿಸಿದ್ದರು. ಇದಕ್ಕೆ ಸ್ಪಂದಿಸಿದ ಮುಖ್ಯಮಂತ್ರಿ, ವಿಶೇಷ ಅನುದಾನ ನೀಡುವ ಭರವಸೆ ನೀಡಿದ್ದರು. ಬೇಸಿಗೆ ಕಳೆದು ಮಳೆಗಾಲ ಆರಂಭವಾದರೂ ಅನುದಾನ ಮಾತ್ರ ಬಿಡುಗಡೆ ಆಗಿಲ್ಲ ಎಂದು ಆರೋಪಿಸಿದರು.