<p><strong>ಕಾರವಾರ: </strong>ಆಳಸಮುದ್ರದಲ್ಲಿ ಮೀನುಗಾರಿಕೆಗೆ ತೆರಳಿದ್ದ ದೋಣಿಗಳು ಹವಾಮಾನ ವೈಪರೀತ್ಯದಿಂದಾಗಿ ದಡಕ್ಕೆ ಮರಳಿವೆ. ಬೈತಖೋಲ್, ಮುದಗಾ, ತದಡಿ ಮೀನುಗಾರಿಕಾ ಬಂದರುಗಳಲ್ಲಿ ದೋಣಿಗಳನ್ನು ಲಂಗರು ಹಾಕಲಾಗಿದೆ.</p>.<p>ಕಾರವಾರದ ಬೈತಖೋಲ್ ಬಂದರಿನಲ್ಲಿ ಸ್ಥಳೀಯ ದೋಣಿಗಳಿಗೇ ಜಾಗ ಇಕ್ಕಟ್ಟಾಗುತ್ತದೆ. ಸಮುದ್ರ ಪ್ರಕ್ಷುಬ್ಧಗೊಂಡ ಕಾರಣ ಹೊರ ಜಿಲ್ಲೆ, ರಾಜ್ಯಗಳ ದೋಣಿಗಳನ್ನೂ ಮೀನುಗಾರರು ಇಲ್ಲಿಗೆ ತಂದರು. ಇದರಿಂದ ಜಾಗದ ಕೊರತೆ ಮತ್ತಷ್ಟು ಹೆಚ್ಚಾಯಿತು. ಅಲ್ಲದೇ ವಾಣಿಜ್ಯ ಬಂದರಿನತ್ತ ಹಡಗುಗಳು ಸಾಗಲು ಸಮಸ್ಯೆಯಾಯಿತು.</p>.<p>ಇದನ್ನರಿತ ಅಧಿಕಾರಿಗಳು ಮೀನುಗಾರಿಕಾ ದೋಣಿಗಳನ್ನು ಬೈತಖೋಲ್ನಿಂದ ಹೊರಗೆ ನಿಲ್ಲಿಸಲು ಸೂಚಿಸಿದರು. ಅದರಂತೆ, ರವೀಂದ್ರನಾಥ ಟ್ಯಾಗೋರ್ ಕಡಲತೀರದ ಸಮೀಪ ಲಂಗರು ಹಾಕಿದರು. ಮಂಗಳೂರು, ಉಡುಪಿ ಜಿಲ್ಲೆಯ ಮಲ್ಪೆ, ಗೋವಾ ಮುಂತಾದ ಊರುಗಳ ಸುಮಾರು 80 ದೋಣಿಗಳು ದಡ ಸೇರಿವೆ.</p>.<p>ರಾಜ್ಯದ ಕರಾವಳಿಯಲ್ಲಿ ಇನ್ನೆರಡು ದಿನ ರಭಸದ ಗಾಳಿಯೊಂದಿಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಸಮುದ್ರದಲ್ಲಿ ಮೂರು ಮೀಟರ್ಗಳಷ್ಟು ಎತ್ತರದ ಅಲೆಗಳು ದಡಕ್ಕೆ ಅಪ್ಪಳಿಸುವ ಸಾಧ್ಯತೆಯಿದೆ. ಆದ್ದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯಬಾರದು ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.</p>.<p class="Subhead"><strong>ಉಪ ಆದಾಯಕ್ಕೆ ಸಮಸ್ಯೆ:</strong>ಕೊರೊನಾ ಕಾರಣದಿಂದ ಈ ಬಾರಿ ಮೀನುಗಾರಿಕೆಗೆ ತೆರಳಿದ ದೋಣಿಗಳ ಸಂಖ್ಯೆ ಕಡಿಮೆಯಿದೆ. ಹೊರರಾಜ್ಯಗಳ ಕಾರ್ಮಿಕರ ಕೊರತೆಯೂ ಇದಕ್ಕೆ ಮುಖ್ಯ ಕಾರಣವಾಗಿದೆ. ಹವಾಮಾನ ವೈಪರೀತ್ಯವಾದಾಗ ನೂರಾರು ದೋಣಿಗಳು ಬಂದರಿನಲ್ಲಿ ಲಂಗರು ಹಾಕುತ್ತಿದ್ದವು.</p>.<p>ಕಳೆದ ವರ್ಷ 200ಕ್ಕೂ ಹೆಚ್ಚು ದೋಣಿಗಳು ದಡ ಸೇರಿದ್ದವು. ಇದರಿಂದ ಬಂದರಿನಲ್ಲಿ ಕೆಲಸ ಮಾಡುವ ತಾಂತ್ರಿಕ ಪರಿಣಿತರಿಗೆ, ಕೂಲಿ ಕಾರ್ಮಿಕರಿಗೆ, ಸುತ್ತಮುತ್ತಲಿನ ಅಂಗಡಿಗಳಿಗೆ ಸ್ವಲ್ಪ ಆದಾಯ ಸಿಗುತ್ತಿತ್ತು. ಆದರೆ, ಈ ಬಾರಿ ಅವುಗಳಿಗೆ ಸಮಸ್ಯೆಯಾಗಿದೆ. ಇದರಿಂದಾಗಿ ಸ್ಥಳೀಯರಿಗೂ ಕೆಲಸವಿಲ್ಲದಂತಾಗಿದೆ ಎಂದು ಮೀನುಗಾರ ಮುಖಂಡ ವಿನಾಯಕ ಹರಿಕಂತ್ರ ಬೇಸರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾರವಾರ: </strong>ಆಳಸಮುದ್ರದಲ್ಲಿ ಮೀನುಗಾರಿಕೆಗೆ ತೆರಳಿದ್ದ ದೋಣಿಗಳು ಹವಾಮಾನ ವೈಪರೀತ್ಯದಿಂದಾಗಿ ದಡಕ್ಕೆ ಮರಳಿವೆ. ಬೈತಖೋಲ್, ಮುದಗಾ, ತದಡಿ ಮೀನುಗಾರಿಕಾ ಬಂದರುಗಳಲ್ಲಿ ದೋಣಿಗಳನ್ನು ಲಂಗರು ಹಾಕಲಾಗಿದೆ.</p>.<p>ಕಾರವಾರದ ಬೈತಖೋಲ್ ಬಂದರಿನಲ್ಲಿ ಸ್ಥಳೀಯ ದೋಣಿಗಳಿಗೇ ಜಾಗ ಇಕ್ಕಟ್ಟಾಗುತ್ತದೆ. ಸಮುದ್ರ ಪ್ರಕ್ಷುಬ್ಧಗೊಂಡ ಕಾರಣ ಹೊರ ಜಿಲ್ಲೆ, ರಾಜ್ಯಗಳ ದೋಣಿಗಳನ್ನೂ ಮೀನುಗಾರರು ಇಲ್ಲಿಗೆ ತಂದರು. ಇದರಿಂದ ಜಾಗದ ಕೊರತೆ ಮತ್ತಷ್ಟು ಹೆಚ್ಚಾಯಿತು. ಅಲ್ಲದೇ ವಾಣಿಜ್ಯ ಬಂದರಿನತ್ತ ಹಡಗುಗಳು ಸಾಗಲು ಸಮಸ್ಯೆಯಾಯಿತು.</p>.<p>ಇದನ್ನರಿತ ಅಧಿಕಾರಿಗಳು ಮೀನುಗಾರಿಕಾ ದೋಣಿಗಳನ್ನು ಬೈತಖೋಲ್ನಿಂದ ಹೊರಗೆ ನಿಲ್ಲಿಸಲು ಸೂಚಿಸಿದರು. ಅದರಂತೆ, ರವೀಂದ್ರನಾಥ ಟ್ಯಾಗೋರ್ ಕಡಲತೀರದ ಸಮೀಪ ಲಂಗರು ಹಾಕಿದರು. ಮಂಗಳೂರು, ಉಡುಪಿ ಜಿಲ್ಲೆಯ ಮಲ್ಪೆ, ಗೋವಾ ಮುಂತಾದ ಊರುಗಳ ಸುಮಾರು 80 ದೋಣಿಗಳು ದಡ ಸೇರಿವೆ.</p>.<p>ರಾಜ್ಯದ ಕರಾವಳಿಯಲ್ಲಿ ಇನ್ನೆರಡು ದಿನ ರಭಸದ ಗಾಳಿಯೊಂದಿಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಸಮುದ್ರದಲ್ಲಿ ಮೂರು ಮೀಟರ್ಗಳಷ್ಟು ಎತ್ತರದ ಅಲೆಗಳು ದಡಕ್ಕೆ ಅಪ್ಪಳಿಸುವ ಸಾಧ್ಯತೆಯಿದೆ. ಆದ್ದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯಬಾರದು ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.</p>.<p class="Subhead"><strong>ಉಪ ಆದಾಯಕ್ಕೆ ಸಮಸ್ಯೆ:</strong>ಕೊರೊನಾ ಕಾರಣದಿಂದ ಈ ಬಾರಿ ಮೀನುಗಾರಿಕೆಗೆ ತೆರಳಿದ ದೋಣಿಗಳ ಸಂಖ್ಯೆ ಕಡಿಮೆಯಿದೆ. ಹೊರರಾಜ್ಯಗಳ ಕಾರ್ಮಿಕರ ಕೊರತೆಯೂ ಇದಕ್ಕೆ ಮುಖ್ಯ ಕಾರಣವಾಗಿದೆ. ಹವಾಮಾನ ವೈಪರೀತ್ಯವಾದಾಗ ನೂರಾರು ದೋಣಿಗಳು ಬಂದರಿನಲ್ಲಿ ಲಂಗರು ಹಾಕುತ್ತಿದ್ದವು.</p>.<p>ಕಳೆದ ವರ್ಷ 200ಕ್ಕೂ ಹೆಚ್ಚು ದೋಣಿಗಳು ದಡ ಸೇರಿದ್ದವು. ಇದರಿಂದ ಬಂದರಿನಲ್ಲಿ ಕೆಲಸ ಮಾಡುವ ತಾಂತ್ರಿಕ ಪರಿಣಿತರಿಗೆ, ಕೂಲಿ ಕಾರ್ಮಿಕರಿಗೆ, ಸುತ್ತಮುತ್ತಲಿನ ಅಂಗಡಿಗಳಿಗೆ ಸ್ವಲ್ಪ ಆದಾಯ ಸಿಗುತ್ತಿತ್ತು. ಆದರೆ, ಈ ಬಾರಿ ಅವುಗಳಿಗೆ ಸಮಸ್ಯೆಯಾಗಿದೆ. ಇದರಿಂದಾಗಿ ಸ್ಥಳೀಯರಿಗೂ ಕೆಲಸವಿಲ್ಲದಂತಾಗಿದೆ ಎಂದು ಮೀನುಗಾರ ಮುಖಂಡ ವಿನಾಯಕ ಹರಿಕಂತ್ರ ಬೇಸರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>