ಕಳೆದ ವರ್ಷ 200ಕ್ಕೂ ಹೆಚ್ಚು ದೋಣಿಗಳು ದಡ ಸೇರಿದ್ದವು. ಇದರಿಂದ ಬಂದರಿನಲ್ಲಿ ಕೆಲಸ ಮಾಡುವ ತಾಂತ್ರಿಕ ಪರಿಣಿತರಿಗೆ, ಕೂಲಿ ಕಾರ್ಮಿಕರಿಗೆ, ಸುತ್ತಮುತ್ತಲಿನ ಅಂಗಡಿಗಳಿಗೆ ಸ್ವಲ್ಪ ಆದಾಯ ಸಿಗುತ್ತಿತ್ತು. ಆದರೆ, ಈ ಬಾರಿ ಅವುಗಳಿಗೆ ಸಮಸ್ಯೆಯಾಗಿದೆ. ಇದರಿಂದಾಗಿ ಸ್ಥಳೀಯರಿಗೂ ಕೆಲಸವಿಲ್ಲದಂತಾಗಿದೆ ಎಂದು ಮೀನುಗಾರ ಮುಖಂಡ ವಿನಾಯಕ ಹರಿಕಂತ್ರ ಬೇಸರಿಸಿದರು.