ದೀಪಾವಳಿ ಹಬ್ಬಕ್ಕೆ ಮನೆಗೆ ಹೋಗಲು ಅವಕಾಶ ಕೊಡುವಂತೆ ಅವರು ವೈದ್ಯರಿಗೆ ಒತ್ತಾಯಿಸಿದ್ದರು. ಉಸಿರಾಟದ ಸಮಸ್ಯೆಯ ಚಿಕಿತ್ಸೆಗೆಂದು ಅವರನ್ನು ಅ.27ರಂದು ಆಸ್ಪತ್ರೆಯ ತೀವ್ರ ನಿಗಾ ಘಟಕಕ್ಕೆ ದಾಖಲಿಸಲಾಗಿತ್ತು. ಆರೋಗ್ಯದಲ್ಲಿ ತುಸು ಚೇತರಿಕೆ ಕಾಣಿಸಿದ್ದರಿಂದ ಅವರನ್ನು ಜನಶಕ್ತಿ ವೇದಿಕೆ ಅಧ್ಯಕ್ಷ ಮಾಧವ ನಾಯಕ, ‘ಕ್ರಿಮ್ಸ್’ ನಿರ್ದೇಶಕ ಡಾ.ಗಜಾನನ ನಾಯಕ ಹಾಗೂ ಇತರ ವೈದ್ಯರ ನೆರವಿನೊಂದಿಗೆ ಮನೆಗೆ ಕರೆದುಕೊಂಡು ಬರಲಾಯಿತು.