‘ಊಟ ಸಿದ್ಧಪಡಿಸಲು ಬಳಸುವ ದಿನಸಿ ಸಾಮಗ್ರಿಗಳು ಗುಣಮಟ್ಟದಿಂದ ಕೂಡಿದೆ ಎಂಬುದನ್ನು ಖಚಿತಪಡಿಸಿಕೊಂಡಿದ್ದೇವೆ. ಪಾಕಶಾಲೆಯ ಕಿಟಕಿಗಳಿಗೆ ಮೆಶ್ ಅಳವಡಿಸಲು ಸೂಚಿಸಲಾಗಿದೆ. ಭಕ್ತರಿಗೆ ಊಟಕ್ಕೆ ನೀಡುವ ತಟ್ಟೆ, ಲೋಟಗಳನ್ನು ಶುಚಿಗೊಳಿಸಲು ಮೂರು ವಾಶ್ ಬೇಸಿನ್ ಸಿದ್ಧವಿಟ್ಟುಕೊಳ್ಳಲು ಸೂಚಿಸಲಾಗಿದೆ’ ಎಂದು ಜಿಲ್ಲಾ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯ ಅಧಿಕಾರಿ ಡಾ.ರಾಜಶೇಖರ ತಿಳಿಸಿದರು.