ಪಶುಸಂಗೋಪನಾ ಇಲಾಖೆ ಉಪನಿರ್ದೇಶಕ ಡಾ. ಸುಬ್ರಾಯ ಭಟ್ಟ ಅವರು ಜಾನುವಾರುಗಳಿಗೆ ಬರುವ ಕಾಲುಬಾಯಿ ಬೇನೆ ರೋಗದ ಲಕ್ಷಣ, ಲಸಿಕೆ ಬಗ್ಗೆ ಸಭೆಗೆ ಮಾಹಿತಿ ನೀಡಿದರು. ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಸರಸ್ವತಿ ಹೆಗಡೆ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಪಂಚಾಯ್ತಿ ಸದಸ್ಯೆ ಪ್ರಭಾವತಿ ಗೌಡ, ತಾಲ್ಲೂಕು ಪಂಚಾಯ್ತಿ ಸದಸ್ಯೆ ಮಹಾಲಕ್ಷ್ಮಿ ಗೌಡ, ಗ್ರಾಮ ಪಂಚಾಯ್ತಿ ಉಪಾಧ್ಯಕ್ಷ ಸಂತೋಷ ನಾಯ್ಕ, ಹಾರೂಗಾರ ಗ್ರೂಪ್ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಗುರುಪಾದ ಹೆಗಡೆ, ಎಂಜಿನಿಯರ್ ರಾಮಚಂದ್ರ ಗಾಂವಕರ ಇದ್ದರು. ಪಿಡಿಒ ಮಮತಾ ಗುಡ್ಡದಮನೆ ಸ್ವಾಗತಿಸಿದರು.