ಮಂಗಳವಾರ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಸ್ವದೇಶಿ ದರ್ಶನ ಯೋಜನೆಯಡಿ ಕೇಂದ್ರ ಸರ್ಕಾರ ಜಿಲ್ಲೆಯ ಪ್ರವಾಸೋದ್ಯಮ ಬೆಳವಣಿಗೆಗೆ ಅನುದಾನ ಬಿಡುಗಡೆ ಮಾಡಿತ್ತು. ಆದರೆ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಇಚ್ಛಾಶಕ್ತಿ ಕೊರತೆಯಿಂದ ಯೋಜನೆ ಸಮರ್ಥವಾಗಿ ಅನುಷ್ಠಾನಗೊಂಡಿಲ್ಲ. ಕುಂಠಿತವಾಗಿರುವ ಪ್ರವಾಸೋದ್ಯಮಕ್ಕೆ ವೇಗ ನೀಡಲು ಯೋಚಿಸಿ, ಹೊಸ ಯೋಜನೆ ಜಾರಿ ಮಾಡಲು ಕ್ರಮಕೈಗೊಳ್ಳಲಾಗಿದೆ’ ಎಂದರು.