<p>ಶಿರಸಿ: ಅರಣ್ಯವಾಸಿಗಳನ್ನು ಒಕ್ಕಲೆಬ್ಬಿಸುವ ಪ್ರಕ್ರಿಯೆಯಲ್ಲಿ ಅರಣ್ಯ ಇಲಾಖೆ ಪೊಲೀಸರನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸಿರುವ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ಅಧ್ಯಕ್ಷ ರವೀಂದ್ರ ನಾಯ್ಕ, ಈ ವಿಷಯದ ಕುರಿತು ಚರ್ಚಿಸಲು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅವರು ಸಮಯ ನಿಗದಿಪಡಿಸಬೇಕು ಎಂದು ಒತ್ತಾಯಿಸಿದ್ದಾರೆ.</p>.<p>ಮಂಗಳವಾರ ಡಿವೈಎಸ್ಪಿ ರವಿ ನಾಯ್ಕ ಅವರನ್ನು ಭೇಟಿ ಮಾಡಿದ ಹೋರಾಟಗಾರರ ನಿಯೋಗ ವರಿಷ್ಠಾಧಿಕಾರಿ ಅವರಿಗೆ ಸಮಯ ನಿಗದಿಪಡಿಸಲು ಕೋರಿದ ಮನವಿ ಪತ್ರವನ್ನು ನೀಡಿತು.</p>.<p>ಈ ವೇಳೆ ಮಾತನಾಡಿದ ರವೀಂದ್ರ ನಾಯ್ಕ, ‘ಒಕ್ಕಲೆಬ್ಬಿಸುವ ಪ್ರಕ್ರಿಯೆಯಲ್ಲಿ ಪೋಲೀಸ್ ಇಲಾಖೆಗೆ ತಪ್ಪು ಮಾಹಿತಿ ನೀಡಲಾಗುತ್ತಿದೆ. ಪೊಲೀಸ್ ಇಲಾಖೆಯಿಂದ ಅರಣ್ಯವಾಸಿಗಳಿಗೆ ಸಮಸ್ಯೆಗಳು ಉಂಟಾಗುತ್ತಿವೆ. ಈ ಕುರಿತು ವರಿಷ್ಠಾಧಿಕಾರಿ ಅವರ ಗಮನಕ್ಕೆ ತಂದು ಕಿರುಕುಳದ ಬಗ್ಗೆ ಚರ್ಚಿಸಬೇಕಿದೆ’ ಎಂದರು.</p>.<p>‘ಕಾನೂನು ಬಾಹಿರವಾಗಿ ಅರಣ್ಯವಾಸಿಗಳನ್ನು ಒಕ್ಕಲೆಬ್ಬಿಸುವ ಸಂದರ್ಭದಲ್ಲಿ ಅರಣ್ಯವಾಸಿಗಳು ಅರಣ್ಯ ಸಿಬ್ಬಂದಿ ಮೇಲೆ ದಾಖಲಿಸಿದ ಕ್ರಿಮಿನಲ್ ಪ್ರಕರಣಕ್ಕೆ ಮಾನ್ಯತೆ ಸಿಗುತ್ತಿಲ್ಲ. ಕೇವಲ ಅರಣ್ಯವಾಸಿಗಳ ಮೇಲಷ್ಟೆ ಪ್ರಕರಣ ದಾಖಲಿಸಲಾಗುತ್ತಿದೆ’ ಎಂದು ಆರೋಪಿಸಿದರು.</p>.<p>‘ದೌರ್ಜನ್ಯದ ಪ್ರವೃತ್ತಿಯ ಕುರಿತು ಚರ್ಚಿಸಲು ಕಳೆದೆರಡು ವರ್ಷದಿಂದ ಪೊಲೀಸ್ ಇಲಾಖೆಗೆ ಹಲವಾರು ಬಾರಿ ಲಿಖಿತ ಮನವಿ ನೀಡಿದ್ದೇವೆ. ಈವರೆಗೂ ಸೂಕ್ತ ಸ್ಪಂದನೆ ಸಿಕ್ಕಿಲ್ಲ’ ಎಂದು ದೂರಿದ್ದಾರೆ.</p>.<p>ನಿಯೋಗದಲ್ಲಿ ವೇದಿಕೆಯ ಜಿಲ್ಲಾ ಘಟಕದ ಸಂಚಾಲಕ ಉದಯ ನಾಯ್ಕ, ತಾಲ್ಲೂಕು ಘಟಕದ ಅಧ್ಯಕ್ಷ ಲಕ್ಷ್ಮಣ ಮಾಳ್ಳಕ್ಕನವರ, ಶಿವಾನಂದ ಪೂಜಾರಿ, ನಾರಾಯಣ ಗೌಡ ಕಕ್ಕಳ್ಳಿ, ಇಬ್ರಾಹಿಂ ಇಮಾಮ್ ಸಾಬ್ ಗೌಡಳ್ಳಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಶಿರಸಿ: ಅರಣ್ಯವಾಸಿಗಳನ್ನು ಒಕ್ಕಲೆಬ್ಬಿಸುವ ಪ್ರಕ್ರಿಯೆಯಲ್ಲಿ ಅರಣ್ಯ ಇಲಾಖೆ ಪೊಲೀಸರನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸಿರುವ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ಅಧ್ಯಕ್ಷ ರವೀಂದ್ರ ನಾಯ್ಕ, ಈ ವಿಷಯದ ಕುರಿತು ಚರ್ಚಿಸಲು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅವರು ಸಮಯ ನಿಗದಿಪಡಿಸಬೇಕು ಎಂದು ಒತ್ತಾಯಿಸಿದ್ದಾರೆ.</p>.<p>ಮಂಗಳವಾರ ಡಿವೈಎಸ್ಪಿ ರವಿ ನಾಯ್ಕ ಅವರನ್ನು ಭೇಟಿ ಮಾಡಿದ ಹೋರಾಟಗಾರರ ನಿಯೋಗ ವರಿಷ್ಠಾಧಿಕಾರಿ ಅವರಿಗೆ ಸಮಯ ನಿಗದಿಪಡಿಸಲು ಕೋರಿದ ಮನವಿ ಪತ್ರವನ್ನು ನೀಡಿತು.</p>.<p>ಈ ವೇಳೆ ಮಾತನಾಡಿದ ರವೀಂದ್ರ ನಾಯ್ಕ, ‘ಒಕ್ಕಲೆಬ್ಬಿಸುವ ಪ್ರಕ್ರಿಯೆಯಲ್ಲಿ ಪೋಲೀಸ್ ಇಲಾಖೆಗೆ ತಪ್ಪು ಮಾಹಿತಿ ನೀಡಲಾಗುತ್ತಿದೆ. ಪೊಲೀಸ್ ಇಲಾಖೆಯಿಂದ ಅರಣ್ಯವಾಸಿಗಳಿಗೆ ಸಮಸ್ಯೆಗಳು ಉಂಟಾಗುತ್ತಿವೆ. ಈ ಕುರಿತು ವರಿಷ್ಠಾಧಿಕಾರಿ ಅವರ ಗಮನಕ್ಕೆ ತಂದು ಕಿರುಕುಳದ ಬಗ್ಗೆ ಚರ್ಚಿಸಬೇಕಿದೆ’ ಎಂದರು.</p>.<p>‘ಕಾನೂನು ಬಾಹಿರವಾಗಿ ಅರಣ್ಯವಾಸಿಗಳನ್ನು ಒಕ್ಕಲೆಬ್ಬಿಸುವ ಸಂದರ್ಭದಲ್ಲಿ ಅರಣ್ಯವಾಸಿಗಳು ಅರಣ್ಯ ಸಿಬ್ಬಂದಿ ಮೇಲೆ ದಾಖಲಿಸಿದ ಕ್ರಿಮಿನಲ್ ಪ್ರಕರಣಕ್ಕೆ ಮಾನ್ಯತೆ ಸಿಗುತ್ತಿಲ್ಲ. ಕೇವಲ ಅರಣ್ಯವಾಸಿಗಳ ಮೇಲಷ್ಟೆ ಪ್ರಕರಣ ದಾಖಲಿಸಲಾಗುತ್ತಿದೆ’ ಎಂದು ಆರೋಪಿಸಿದರು.</p>.<p>‘ದೌರ್ಜನ್ಯದ ಪ್ರವೃತ್ತಿಯ ಕುರಿತು ಚರ್ಚಿಸಲು ಕಳೆದೆರಡು ವರ್ಷದಿಂದ ಪೊಲೀಸ್ ಇಲಾಖೆಗೆ ಹಲವಾರು ಬಾರಿ ಲಿಖಿತ ಮನವಿ ನೀಡಿದ್ದೇವೆ. ಈವರೆಗೂ ಸೂಕ್ತ ಸ್ಪಂದನೆ ಸಿಕ್ಕಿಲ್ಲ’ ಎಂದು ದೂರಿದ್ದಾರೆ.</p>.<p>ನಿಯೋಗದಲ್ಲಿ ವೇದಿಕೆಯ ಜಿಲ್ಲಾ ಘಟಕದ ಸಂಚಾಲಕ ಉದಯ ನಾಯ್ಕ, ತಾಲ್ಲೂಕು ಘಟಕದ ಅಧ್ಯಕ್ಷ ಲಕ್ಷ್ಮಣ ಮಾಳ್ಳಕ್ಕನವರ, ಶಿವಾನಂದ ಪೂಜಾರಿ, ನಾರಾಯಣ ಗೌಡ ಕಕ್ಕಳ್ಳಿ, ಇಬ್ರಾಹಿಂ ಇಮಾಮ್ ಸಾಬ್ ಗೌಡಳ್ಳಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>