ನಗರದ ಮಕ್ಕಳ ಉದ್ಯಾನದಲ್ಲಿರುವ ಹುತಾತ್ಮರ ಸ್ಮಾರಕಕ್ಕೆ ಗಣ್ಯರು ಪುಷ್ಪ ನಮನ ಸಲ್ಲಿಸಿದರು. ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶ ಶಾಂತವೀರ ಶಿವಪ್ಪ ಮಾತನಾಡಿ, ‘ದೇಶದಲ್ಲೇ ಅತಿ ಹೆಚ್ಚು ಅರಣ್ಯ ಪ್ರದೇಶ ಹೊಂದಿರುವ ಉತ್ತರ ಕನ್ನಡ ಜಿಲ್ಲೆಯಲ್ಲಿ ಸಿಬ್ಬಂದಿ ಸಂಖ್ಯೆ ಕಡಿಮೆಯಿದೆ. ಸಿಬ್ಬಂದಿ ಕೊರತೆಯ ನಡುವೆಯೂ ಅರಣ್ಯ ಸಂರಕ್ಷಣೆಯಾಗುತ್ತಿದೆ. ಸರ್ಕಾರ ಅರಣ್ಯ ಇಲಾಖೆಗೆ ಸುಧಾರಿತ ಸೌಲಭ್ಯ, ಆಯುಧಗಳನ್ನು ಕಲ್ಪಿಸಬೇಕು’ ಎಂದರು.