ಕಾರವಾರ– ಜೊಯಿಡಾ ವಿಧಾನಸಭಾ ಕ್ಷೇತ್ರದಿಂದ ‘ಕ್ರಾಂತಿರಂಗ’ ಪಕ್ಷದಿಂದ ಒಂದು ಸಲ, ಕಾಂಗ್ರೆಸ್ ಪಕ್ಷದಿಂದ ಎರಡು ಸಲ ಶಾಸಕರಾಗಿ ಆಯ್ಕೆಯಾಗಿದ್ದರು. 1993ರ ಅವಧಿಯಲ್ಲಿ ವೀರಪ್ಪ ಮೊಯ್ಲಿ ನೇತೃತ್ವದ ರಾಜ್ಯ ಸರ್ಕಾರದಲ್ಲಿ ಗ್ರಂಥಾಲಯ ಮತ್ತು ವಯಸ್ಕರ ಶಿಕ್ಷಣ ಸಚಿವರಾಗಿದ್ದರು. ಬಳಿಕ ರಾಜಕೀಯದಲ್ಲಿ ಹಿನ್ನಡೆ ಕಂಡಿದ್ದ ಅವರು, ಜೆ.ಡಿ.ಎಸ್ ಹಾಗೂ ಬಿ.ಜೆ.ಪಿ.ಗೆ ಪಕ್ಷಾಂತರವಾಗಿದ್ದರು. ಬಳಿಕ ಮತ್ತೆ ಕಾಂಗ್ರೆಸ್ಗೆ ಮರಳಿದ್ದರು.