ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಕ್ರಮ ಬೇಟೆ: ನಾಲ್ವರ ಬಂಧನ

Last Updated 12 ನವೆಂಬರ್ 2019, 16:31 IST
ಅಕ್ಷರ ಗಾತ್ರ

ಸಿದ್ದಾಪುರ: ದುಬಾರೆ ಮೀಸಲು ಅರಣ್ಯದಲ್ಲಿ ಜಿಂಕೆಯೊಂದನ್ನು ಬೇಟೆಯಾಡಿದ ನಾಲ್ವರು ಆರೋಪಿಗಳನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಬಂಧಿಸಿದ್ದಾರೆ.

ಕುಶಾಲನಗರ ಅರಣ್ಯ ವ್ಯಾಪ್ತಿಯ ದುಬಾರೆ ಮೀಸಲು ಅರಣ್ಯದ ಆನೆಕೆರೆ ಎಂಬಲ್ಲಿಗೆ ಅಕ್ರಮವಾಗಿ ಪ್ರವೇಶಿಸಿದ ಮಾಲ್ದಾರೆ ಗ್ರಾಮದ ಹಣ್ಣಿನ ತೋಟದ ನಿವಾಸಿಗಳಾದ ಸಿದ್ಧ (40), ರವಿ (28), ಪ್ರಕಾಶ (26 ಹಾಗೂ ಅಣ್ಣಯ್ಯ (29) ಎಂಬವರು ಜಿಂಕೆಯೊಂದನ್ನು ಬೇಟೆಯಾಡಿ ಮಾಂಸ ಮಾಡಿ ಮನೆಯಲ್ಲಿ ಇರಿಸಲಾಗಿದೆ ಎನ್ನಲಾಗಿದೆ.

ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿದ ಅರಣ್ಯ ಇಲಾಖೆಯ ಅಧಿಕಾರಿಗಳು, ಜಿಂಕೆಯ ಕೊಂಬು, ಮಾಂಸದೊಂದಿಗೆ ಆರೋಪಿಗಳನ್ನು ಬಂಧಿಸಿದ್ದು, ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ.

ಕಾರ್ಯಾಚರಣೆಯಲ್ಲಿ ಮಡಿಕೇರಿ ವಿಭಾಗ ಡಿ.ಸಿ.ಎಫ್ ಪ್ರಭಾಕರ್ ಮಾರ್ಗದರ್ಶನದಲ್ಲಿ ಕುಶಾಲನಗರ ವಲಯ ಅರಣ್ಯಾಧಿಕಾರಿ ಅನನ್ಯ, ಉಪ ವಲಯ ಅರಣ್ಯಾಧಿಕಾರಿ ಮಂಜುನಾಥ್ ಗೂಳಿ, ಸಿಬ್ಬಂದಿ ಮಣಿಕಂಠ ಸೇರಿದಂತೆ ಆರ್.ಆರ್.ಟಿ ಸಿಬ್ಬಂದಿ ಇದ್ದರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT