ಸಿದ್ದಾಪುರ: ದುಬಾರೆ ಮೀಸಲು ಅರಣ್ಯದಲ್ಲಿ ಜಿಂಕೆಯೊಂದನ್ನು ಬೇಟೆಯಾಡಿದ ನಾಲ್ವರು ಆರೋಪಿಗಳನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಬಂಧಿಸಿದ್ದಾರೆ.
ಕುಶಾಲನಗರ ಅರಣ್ಯ ವ್ಯಾಪ್ತಿಯ ದುಬಾರೆ ಮೀಸಲು ಅರಣ್ಯದ ಆನೆಕೆರೆ ಎಂಬಲ್ಲಿಗೆ ಅಕ್ರಮವಾಗಿ ಪ್ರವೇಶಿಸಿದ ಮಾಲ್ದಾರೆ ಗ್ರಾಮದ ಹಣ್ಣಿನ ತೋಟದ ನಿವಾಸಿಗಳಾದ ಸಿದ್ಧ (40), ರವಿ (28), ಪ್ರಕಾಶ (26 ಹಾಗೂ ಅಣ್ಣಯ್ಯ (29) ಎಂಬವರು ಜಿಂಕೆಯೊಂದನ್ನು ಬೇಟೆಯಾಡಿ ಮಾಂಸ ಮಾಡಿ ಮನೆಯಲ್ಲಿ ಇರಿಸಲಾಗಿದೆ ಎನ್ನಲಾಗಿದೆ.
ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿದ ಅರಣ್ಯ ಇಲಾಖೆಯ ಅಧಿಕಾರಿಗಳು, ಜಿಂಕೆಯ ಕೊಂಬು, ಮಾಂಸದೊಂದಿಗೆ ಆರೋಪಿಗಳನ್ನು ಬಂಧಿಸಿದ್ದು, ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ.
ಕಾರ್ಯಾಚರಣೆಯಲ್ಲಿ ಮಡಿಕೇರಿ ವಿಭಾಗ ಡಿ.ಸಿ.ಎಫ್ ಪ್ರಭಾಕರ್ ಮಾರ್ಗದರ್ಶನದಲ್ಲಿ ಕುಶಾಲನಗರ ವಲಯ ಅರಣ್ಯಾಧಿಕಾರಿ ಅನನ್ಯ, ಉಪ ವಲಯ ಅರಣ್ಯಾಧಿಕಾರಿ ಮಂಜುನಾಥ್ ಗೂಳಿ, ಸಿಬ್ಬಂದಿ ಮಣಿಕಂಠ ಸೇರಿದಂತೆ ಆರ್.ಆರ್.ಟಿ ಸಿಬ್ಬಂದಿ ಇದ್ದರು