ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾರು– ಲಾರಿ ನಡುವೆ ಭೀಕರ ಅಪಘಾತ: ನಾಲ್ವರ ಸಾವು

Last Updated 24 ಸೆಪ್ಟೆಂಬರ್ 2020, 14:04 IST
ಅಕ್ಷರ ಗಾತ್ರ

ಯಲ್ಲಾಪುರ: ತಾಲ್ಲೂಕಿನ ಕಿರವತ್ತಿ ಬಳಿ ಗುರುವಾರ ಸಂಜೆ ಕಾರು ಮತ್ತು ಲಾರಿ ನಡುವೆ ಭೀಕರ ಅಪಘಾತವಾಗಿದೆ. ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಹೊಸಳ್ಳಿ – ಗಾಂವಠಾಣಾಕ್ಕೆ ಹೋಗುವ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಈ ಅಪಘಾತ ನಡೆದಿದೆ. ಅಂಕೋಲಾ ಕಡೆಗೆ ತೆರಳುತ್ತಿದ್ದ ದೆಹಲಿ‌ ನೋಂದಣಿ ಸಂಖ್ಯೆ ಹೊಂದಿದ್ದ ಕಾರು ಹಾಗೂ ಹುಬ್ಬಳ್ಳಿಯತ್ತ ಸಾಗುತ್ತಿದ್ದ ಮಹಾರಾಷ್ಟ್ರ ನೋಂದಣಿಯ ಲಾರಿ ಮುಖಾಮುಖಿ ಡಿಕ್ಕಿಯಾಗಿ ಈ ಅಪಘಾತವಾಗಿದೆ.

ಇಬ್ಬರು ಪುರುಷರು ಹಾಗೂ ಇಬ್ಬರು ಮಹಿಳೆಯರು ಮೃತಪಟ್ಟವರು. ಕಾರು ಪುಷ್ಪಾ ನಾಯರ್ ಎಂಬುವವರ ಹೆಸರಿನಲ್ಲಿ ನೋಂದಣಿಯಾಗಿದೆ ಎಂದು ಪ್ರಾಥಮಿಕ ಮಾಹಿತಿ ಲಭಿಸಿದೆ. ಹೀಗಾಗಿ ಕಾರು ಕೇರಳಕ್ಕೆ ತೆರಳುತ್ತಿತ್ತು ಎಂದು ಶಂಕಿಸಲಾಗಿದೆ.
ಪೋಲಿಸರು ಸ್ಥಳಕ್ಕೆ ತೆರಳಿದ್ದು, ತನಿಖೆ ಕೈಗೊಂಡಿದ್ದಾರೆ.

ಅಪಘಾತದ ಸ್ಥಳದಲ್ಲಿ ರಕ್ಷಣಾ ಕಾರ್ಯಕ್ಕೆ ಯಲ್ಲಾಪುರದಿಂದ ತೆರಳುತ್ತಿದ್ದ ಕ್ರೇನ್‌ ಕೂಡ ಅಪಘಾತಕ್ಕೀಡಾಗಿದೆ. ಮಾವಳ್ಳಿ ಕ್ರಾಸ್ ಬಳಿ ಬೀಡಾಡಿ ದನಗಳು ಅಡ್ಡ ಬಂದು ಕ್ರೇನ್ ಪಲ್ಟಿಯಾಗಿದೆ. ಅದರ ಚಾಲಕನ ಕೈಗೆ ಗಂಭೀರ ಸ್ವರೂಪದ ಗಾಯಗಳಾಗಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT