ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉತ್ತರ ಕನ್ನಡ ತಲುಪಿದ ನಾಲ್ಕು ವಿಶೇಷ 'ಆಕ್ಸಿ ಬಸ್‌'ಗಳು

Last Updated 28 ಮೇ 2021, 6:30 IST
ಅಕ್ಷರ ಗಾತ್ರ

ಕಾರವಾರ: ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರಿಗೆ ಆಮ್ಲಜನಕದ ಪೂರೈಸಲು ನಾಲ್ಕು ವಿಶೇಷ 'ಆಕ್ಸಿ ಬಸ್'ಗಳು ಜಿಲ್ಲೆಗೆ ಬಂದಿವೆ. ಸರ್ಕಾರೇತರ ಸ್ವಯಂ ಸೇವಾ ಸಂಸ್ಥೆಯೊಂದು ಈ ಬಸ್‌ಗಳನ್ನು ನೀಡಿದ್ದು, ರಾಜ್ಯ ಸರ್ಕಾರದೊಂದಿಗೆ ಸಮನ್ವಯದಲ್ಲಿ ಬಳಕೆಯಾಗಲಿವೆ.

ಬೆಂಗಳೂರಿನ 'ಇಂಡಿ ವಿಲೇಜ್' ಎಂಬ ಸಂಸ್ಥೆಯೊಂದು ನೀಡಿದ್ದು, ಆಕ್ಸಿಜನ್ ಕಾನ್ಸಂಟ್ರೇಟರ್ಸ್ ಒಳಗೊಂಡಿವೆ. ಸೋಂಕಿತರು ಹೆಚ್ಚಿರುವ ಕೆಲವು ಜಿಲ್ಲೆಗಳಲ್ಲಿ ಆಮ್ಲಜನಕ ಸಹಿತ ಹಾಸಿಗೆಗಳು ಸಿಗದೆ ಸಮಸ್ಯೆಯಾಗಿದೆ. ಹಾಸಿಗೆ ಸಿಗುವ ತನಕ ಸೋಂಕಿತರು ವೈದ್ಯಕೀಯ ಆಮ್ಲಜನಕದ ಸಹಾಯದಲ್ಲಿ ಇರಲು ಈ ಬಸ್‌ಗಳು ಬಳಕೆಯಾಗುತ್ತವೆ.

ಈ ಬಗ್ಗೆ 'ಪ್ರಜಾವಾಣಿ'ಗೆ ಮಾಹಿತಿ ನೀಡಿದ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, 'ನಮ್ಮ ಜಿಲ್ಲೆಯಲ್ಲಿ ಈವರೆಗೆ ಹಾಸಿಗೆಯ ಕೊರತೆಯಾಗಿಲ್ಲ. ಆದರೂ ಮುನ್ನೆಚ್ಚರಿಕೆ ಕ್ರಮವಾಗಿ ಆಕ್ಸಿಜನ್ ಕಾನ್ಸಂಟ್ರೇಟರ್‌ಗಳು ಇರುವ ಬಸ್‌ಗಳನ್ನು ಸರ್ಕಾರ ಕಳುಹಿಸಿಕೊಟ್ಟಿದೆ' ಎಂದರು.

'ಬಸ್‌ನಲ್ಲಿರುವ ಸಲಕರಣೆಗಳ ಮೂಲಕ ದೇಹದಲ್ಲಿ ಆಮ್ಲಜನಕದ ಮಟ್ಟವನ್ನು 95ಕ್ಕೆ ಏರಿಸಲು ಸಾಧ್ಯವಿದೆ. ಕಾರವಾರ, ಹೊನ್ನಾವರ, ಶಿರಸಿ ಮತ್ತು ದಾಂಡೇಲಿಯಲ್ಲಿ ಈ ಬಸ್‌ಗಳನ್ನು ನಿಲುಗಡೆ ಮಾಡಲಾಗುವುದು. ಅಲ್ಲಿಂದಲೇ ಅಗತ್ಯವಿರುವ ಕಡೆಗೆ ಕಳುಹಿಸಲಾಗುವುದು' ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT