‘ಕೋವಿಡ್ ಪರಿಹಾರ ನಿಧಿ ನೀಡುವುದಾಗಿ ಸೈಬರ್ ವಂಚಕರು ಕರೆ ಮಾಡಿ, ಕೆಲವು ಸೋಂಕಿತರ ಬ್ಯಾಂಕ್ ಖಾತೆಯ ಮಾಹಿತಿ ಪಡೆದುಕೊಂಡಿದ್ದಾರೆ. ಆದರೆ, ಆ ಹಣವನ್ನು ಪಡೆದುಕೊಳ್ಳಲು ತೆರಿಗೆ ಪಾವತಿಸುವಂತೆ ತಿಳಿಸಿ, ಹಣ ಪಡೆದು ವಂಚಿಸಲು ಯತ್ನಿಸಿದ್ದಾರೆ. ಆದ್ದರಿಂದ,ಈಸಂಗತಿಯನ್ನು ಪೊಲೀಸರು ಗಂಭೀರವಾಗಿ ಪರಿಗಣಿಸಬೇಕು. ಸೋಂಕಿತರ ಮಾಹಿತಿಯನ್ನು ಸೋರಿಕೆ ಮಾಡಿದವರನ್ನುಪತ್ತೆ ಹಚ್ಚಿ ಕಾನೂನು ಕ್ರಮ ಕೈಗೊಳ್ಳಬೇಕು’ ಎಂದು ಒತ್ತಾಯಿಸಿದ್ದಾರೆ.