ಶಿರಸಿ: ನಗರದ ಹಳೆಯ ಬಸ್ ನಿಲ್ದಾಣದ ಪುನರ್ ನಿರ್ಮಾಣಕ್ಕೆ ₹6.78 ಕೋಟಿ ವೆಚ್ಚದ ಯೋಜನೆಗೆನಗರ ಭೂಸಾರಿಗೆ ನಿರ್ದೇಶನಾಲಯ ಮಂಜೂರಾತಿ ನೀಡಿದೆ.
ಈ ಕುರಿತು ವಿಧಾನಸಭಾ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಸ್ಪಷ್ಟಪಡಿಸಿದ್ದಾರೆ. ಈ ಮೊದಲು ₹5 ಕೋಟಿ ಅನುದಾನ ಮಂಜೂರಾಗಿತ್ತು. ತಾಂತ್ರಿಕ ಕಾರಣದಿಂದ ಕಾಮಗಾರಿ ಕೈಗೆತ್ತಿಕೊಳ್ಳಲು ಸಾಧ್ಯವಾಗದ ಹಿನ್ನೆಲೆ ಹೆಚ್ಚುವರಿ ಮೊತ್ತಕ್ಕೆ ಪ್ರಸ್ತಾವ ಸಲ್ಲಿಕೆಯಾಗಿತ್ತು. ಅದಕ್ಕೆ ಅನುಮೋದನೆ ಸಿಕ್ಕಿದೆ ಎಂದು ತಿಳಿಸಿದ್ದಾರೆ.
ಕಳೆದ ಆಗಸ್ಟ್ನಲ್ಲಿಯೇ ಹಳೆ ಬಸ್ ನಿಲ್ದಾಣ ಕಟ್ಟಡ ತೆರವುಗೊಳಿಸಲಾಗಿತ್ತು. ವರ್ಷದ ಬಳಿಕ ಕಾಮಗಾರಿಗೆ ಅಗತ್ಯ ಅನುದಾನ ಮಂಜೂರಾತಿಗೆ ಒಪ್ಪಿಗೆ ಸಿಕ್ಕಿದಂತಾಗಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.