ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ, ಉಪನಿರ್ದೇಶಕರ ಕಚೇರಿಯ ಜಂಟಿ ಆಶ್ರಯದಲ್ಲಿ ಆಯೋಜಿಸಿದ್ದ ಸ್ಪರ್ಧೆಯಲ್ಲಿ ಬೆಂಗಳೂರು ದಕ್ಷಿಣ, ಬೆಂಗಳೂರು ಉತ್ತರ, ಧಾರವಾಡ, ಗದಗ, ಚಿಕ್ಕೋಡಿ, ಮಂಡ್ಯ, ಉಡುಪಿ, ಚಾಮರಾಜನಗರ, ಶಿರಸಿಯ ಆವೆಮರಿಯಾ ಬ್ಯಾಂಡ್ ತಂಡಗಳು ಭಾಗವಹಿಸಿದ್ದವು. ಸುಂದರ ಸಮವಸ್ತ್ರ ಧರಿಸಿದ್ದ ಮಕ್ಕಳು, ಆಕರ್ಷಕವಾಗಿ ಬ್ಯಾಂಡ್ ನುಡಿಸಿ, ಗಮನ ಸೆಳೆದರು. ಶಿಕ್ಷಣ ಇಲಾಖೆಯ ಅಧಿಕಾರಿ ವೆಂಕಟೇಶ ಪಟಗಾರ ಸ್ಪರ್ಧೆಗೆ ಚಾಲನೆ ನೀಡಿ, ‘ಈ ಸ್ಪರ್ಧೆ ಇತ್ತೀಚೆಗೆ ಆರಂಭಗೊಂಡಿದ್ದರೂ, ಹೆಚ್ಚು ಪ್ರಸಿದ್ಧಿಗೆ ಬರುತ್ತಿದೆ. ವಿದ್ಯಾರ್ಥಿಗಳುಪಠ್ಯದಷ್ಟೇ ಪಠ್ಯೇತರ ಚಟುವಟಿಕೆಗೂ ಮಹತ್ವ ನೀಡಬೇಕು’ ಎಂದರು.