ಕಾರವಾರದ ಮಾರುತಿ ಮಂದಿರ, ಕಾಜುಬಾಗ, ಕೋಡಿಬಾಗ, ಆಟೊ ನಿಲ್ದಾಣ ಸೇರಿದಂತೆ ಹಲವೆಡೆ ಸಾರ್ವಜನಿಕ ಗಣೇಶೋತ್ಸವ ಸಮಿತಿಗಳು ವಿಗ್ರಹಗಳನ್ನು ಪ್ರತಿಷ್ಠಾಪಿಸಿದ್ದವು. ನಗರದ ಗ್ರಾಮೀಣ ಮತ್ತು ನಗರ ಪೊಲೀಸ್ ಠಾಣೆಗಳಲ್ಲೂ ಪೊಲೀಸ್ ಸಿಬ್ಬಂದಿ ಸಂಭ್ರಮದಿಂದ ಗಣಪತಿಯನ್ನು ಪೂಜಿಸಿದರು. ಈ ಸಂದರ್ಭದಲ್ಲಿ ಪೊಲೀಸ್ ವರಿಷ್ಠಾಧಿಕಾರಿ ಶಿವಪ್ರಕಾಶ ದೇವರಾಜು, ಡಿ.ವೈ.ಎಸ್.ಪಿ ಅರವಿಂದ ಕಲಗುಜ್ಜಿ, ಸಿ.ಪಿ.ಐ ಸಂತೋಷ ಕುಮಾರ್, ಪಿ.ಎಸ್.ಐ ಸಂತೋಷ್ ಹಾಗೂ ಇತರ ಅಧಿಕಾರಿಗಳು, ಸಿಬ್ಬಂದಿ ಹಾಜರಿದ್ದರು.