ಶಿಡ್ಲಗುಂಡಿ ಸಮೀಪ ರಾಜ್ಯ ಹೆದ್ದಾರಿಯ ಡಾಂಬರು ಕೊಚ್ಚಿಕೊಂಡು ಹೋಗಿದ್ದು, ಮೋರಿಯೊಂದರ ಬಳಿ ನೀರು ಹರಿದು ಬೃಹತ್ ಕಂದಕವೇ ನಿರ್ಮಾಣವಾಗಿದೆ. ಬೀಗಾರದ ಒಳರಸ್ತೆಯಲ್ಲಿ ಮಣ್ಣು ಕುಸಿದಿದ್ದು, ರಸ್ತೆ ಅಪಾಯಕಾರಿ ಸ್ಥಿತಿಯಲ್ಲಿದೆ. ಹಲವು ಗ್ರಾಮಗಳಿಗೆ ವಿದ್ಯುತ್ ಹಾಗೂ ಬಿಎಸ್ಎನ್ಎಲ್ ಮೊಬೈಲ್ ನೆಟ್ವರ್ಕ್ ಅನ್ನು ಪುನಃ ಸಂಪರ್ಕಿಸಲಾಗಿದೆ. ಕಾಡಿನ ಮಧ್ಯೆ ಮರ ಬಿದ್ದು, ಧರೆ ಕುಸಿದು ತುಂಡಾಗಿದ್ದ ಆಪ್ಟಿಕಲ್ ಫೈಬರ್ ಕೇಬಲ್ಗಳನ್ನು ಬಿಎಸ್ಎನ್ಎಲ್ ಸಿಬ್ಬಂದಿ ನಿರಂತರ ಶ್ರಮ ವಹಿಸಿಜೋಡಿಸಿದ್ದಾರೆ. ತುಂಡಾಗಿದ್ದ ವಿದ್ಯುತ್ ಕಂಬ, ತಂತಿಗಳನ್ನು ಹೆಸ್ಕಾಂ ಸಿಬ್ಬಂದಿ ದುರಸ್ತಿ ಮಾಡಿದ್ದಾರೆ.