ಶಿರಸಿ: ಇ–ಸ್ವತ್ತು ತಂತ್ರಾಂಶ ಅನುಷ್ಠಾನಗೊಂಡಾಗಿನಿಂದ ಗ್ರಾಮೀಣ ಪ್ರದೇಶದ ಜನರಿಗೆ ತೊಂದರೆ ಆಗುತ್ತಿದ್ದು, ಸಮಸ್ಯೆ ನಿವಾರಿಸಬೇಕು ಎಂದು ಒತ್ತಾಯಿಸಿ, ತಾಲ್ಲೂಕು ಗ್ರಾಮ ಪಂಚಾಯ್ತಿ ಅಧ್ಯಕ್ಷ, ಉಪಾಧ್ಯಕ್ಷ ಹಾಗೂ ಸದಸ್ಯರ ಒಕ್ಕೂಟದ ಸದಸ್ಯರು ಗುರುವಾರ ಇಲ್ಲಿ ಪ್ರತಿಭಟನೆ ನಡೆಸಿ, ಉಪವಿಭಾಗಾಧಿಕಾರಿಗೆ ಮನವಿ ಸಲ್ಲಿಸಿದರು.