ಈ ಸಂದರ್ಭದಲ್ಲಿ ಮಾತನಾಡಿದ ವಾಟಾಳ್ ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ರಾಘು ನಾಯ್ಕ, ‘ಸೆ.1ರಂದು ಗೋವಾ ಗಡಿಯನ್ನು ತೆರೆದು ಮುಕ್ತ ಸಂಚಾರಕ್ಕೆ ಅನುಮತಿ ನೀಡದಿದ್ದರೆ ಸೆ.5ರಂದು ಹೋರಾಟ ತೀವ್ರಗೊಳಿಸಲಾಗುವುದು. ನಂತರ ಕಾರವಾರದ ಮೂಲಕ ಗೋವಾ ವಾಹನಗಳ ಸಂಚಾರಕ್ಕೆ ಅವಕಾಶ ನೀಡುವುದಿಲ್ಲ. ಆ ರಾಜ್ಯಕ್ಕೆ ಹಾಲು, ತರಕಾರಿ, ಮೀನು ಸಾಗಣೆ ತಡೆ ಹಿಡಿಯಲಾಗುವುದು. ಜೈಲು ಭರೋ ಹೋರಾಟವನ್ನೂ ಹಮ್ಮಿಕೊಳ್ಳಲಾಗುವುದು’ಎಂದು ಎಚ್ಚರಿಕೆ ನೀಡಿದರು.