<p><strong>ಕಾರವಾರ: </strong>ಗೋವಾ ಗಡಿ ಪ್ರವೇಶಕ್ಕೆ ಮುಕ್ತ ಅವಕಾಶ ಕೊಡಬೇಕು ಎಂದು ಒತ್ತಾಯಿಸಿ ವಾಟಾಳ್ ಪಕ್ಷದ ನೇತೃತ್ವದಲ್ಲಿ ತಾಲ್ಲೂಕಿನ ಮಾಜಾಳಿಯಲ್ಲಿ ಶನಿವಾರ ಪ್ರತಿಭಟನೆ ನಡೆಸಲಾಯಿತು. ಕರ್ನಾಟಕ- ಗೋವಾ ಗಡಿಯಲ್ಲಿ ವಾಹನ ಸಂಚಾರ ತಡೆದು ಆಕ್ರೋಶ ವ್ಯಕ್ತಪಡಿಸಲಾಯಿತು.</p>.<p>ಈ ಸಂದರ್ಭದಲ್ಲಿ ಮಾತನಾಡಿದ ವಾಟಾಳ್ ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ರಾಘು ನಾಯ್ಕ, ‘ಸೆ.1ರಂದು ಗೋವಾ ಗಡಿಯನ್ನು ತೆರೆದು ಮುಕ್ತ ಸಂಚಾರಕ್ಕೆ ಅನುಮತಿ ನೀಡದಿದ್ದರೆ ಸೆ.5ರಂದು ಹೋರಾಟ ತೀವ್ರಗೊಳಿಸಲಾಗುವುದು. ನಂತರ ಕಾರವಾರದ ಮೂಲಕ ಗೋವಾ ವಾಹನಗಳ ಸಂಚಾರಕ್ಕೆ ಅವಕಾಶ ನೀಡುವುದಿಲ್ಲ. ಆ ರಾಜ್ಯಕ್ಕೆ ಹಾಲು, ತರಕಾರಿ, ಮೀನು ಸಾಗಣೆ ತಡೆ ಹಿಡಿಯಲಾಗುವುದು. ಜೈಲು ಭರೋ ಹೋರಾಟವನ್ನೂ ಹಮ್ಮಿಕೊಳ್ಳಲಾಗುವುದು’ಎಂದು ಎಚ್ಚರಿಕೆ ನೀಡಿದರು.</p>.<p>ಈ ಸಂದರ್ಭದಲ್ಲಿ ಮನವಿ ಸ್ವೀಕರಿಸಿದ ಗೋವಾ ರಾಜ್ಯದ ಕಾಣಕೋಣದ ಡೆಪ್ಯುಟಿ ಕಲೆಕ್ಟರ್ ರಾಜೇಶ ಪ್ರಭು, ‘ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿಯ (ಎಂ.ಸಿ.ಐ.ಆರ್) ನಿಯಮದ ಪ್ರಕಾರ ಗಡಿಯಲ್ಲಿ ನಿರ್ಬಂಧ ಹೇರಲಾಗಿದೆ. ಇದರಲ್ಲಿ ತಾರತಮ್ಯ ಮಾಡುತ್ತಿಲ್ಲ’ಎಂದರು.</p>.<p>ಹೊರ ರಾಜ್ಯಗಳಿಂದ ತನ್ನ ರಾಜ್ಯಕ್ಕೆ ಬರುವ ಪ್ರಯಾಣಿಕರು ಕಡ್ಡಾಯವಾಗಿ ಕೋವಿಡ್ ನೆಗೆಟಿವ್ ಪರೀಕ್ಷಾ ವರದಿ ತರಬೇಕು. ಅದಾಗದಿದ್ದರೆ, ಗೋವಾದಲ್ಲಿ 14 ದಿನಗಳ ಹೋಂ ಕ್ವಾರಂಟೈನ್ ಆಗಬೇಕು. ಇಲ್ಲದಿದ್ದರೆ, 2000 ರೂಪಾಯಿ ಪಾವತಿಸಿ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಬೇಕು ಎಂದು ನಿಯಮ ಹೇರಿದೆ.</p>.<p>ಕೇಂದ್ರ ಸರ್ಕಾರವು ಅಂತರರಾಜ್ಯ ಗಡಿಗಳನ್ನು ಮುಕ್ತವಾಗಿಡುವಂತೆ ಸೂಚಿಸಿದ್ದರೂ ಗೋವಾ ಪಾಲಿಸದಿರುವುದು ಹೊರ ರಾಜ್ಯಗಳ ಜನರಿಗೆ ಸಮಸ್ಯೆ ತಂದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾರವಾರ: </strong>ಗೋವಾ ಗಡಿ ಪ್ರವೇಶಕ್ಕೆ ಮುಕ್ತ ಅವಕಾಶ ಕೊಡಬೇಕು ಎಂದು ಒತ್ತಾಯಿಸಿ ವಾಟಾಳ್ ಪಕ್ಷದ ನೇತೃತ್ವದಲ್ಲಿ ತಾಲ್ಲೂಕಿನ ಮಾಜಾಳಿಯಲ್ಲಿ ಶನಿವಾರ ಪ್ರತಿಭಟನೆ ನಡೆಸಲಾಯಿತು. ಕರ್ನಾಟಕ- ಗೋವಾ ಗಡಿಯಲ್ಲಿ ವಾಹನ ಸಂಚಾರ ತಡೆದು ಆಕ್ರೋಶ ವ್ಯಕ್ತಪಡಿಸಲಾಯಿತು.</p>.<p>ಈ ಸಂದರ್ಭದಲ್ಲಿ ಮಾತನಾಡಿದ ವಾಟಾಳ್ ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ರಾಘು ನಾಯ್ಕ, ‘ಸೆ.1ರಂದು ಗೋವಾ ಗಡಿಯನ್ನು ತೆರೆದು ಮುಕ್ತ ಸಂಚಾರಕ್ಕೆ ಅನುಮತಿ ನೀಡದಿದ್ದರೆ ಸೆ.5ರಂದು ಹೋರಾಟ ತೀವ್ರಗೊಳಿಸಲಾಗುವುದು. ನಂತರ ಕಾರವಾರದ ಮೂಲಕ ಗೋವಾ ವಾಹನಗಳ ಸಂಚಾರಕ್ಕೆ ಅವಕಾಶ ನೀಡುವುದಿಲ್ಲ. ಆ ರಾಜ್ಯಕ್ಕೆ ಹಾಲು, ತರಕಾರಿ, ಮೀನು ಸಾಗಣೆ ತಡೆ ಹಿಡಿಯಲಾಗುವುದು. ಜೈಲು ಭರೋ ಹೋರಾಟವನ್ನೂ ಹಮ್ಮಿಕೊಳ್ಳಲಾಗುವುದು’ಎಂದು ಎಚ್ಚರಿಕೆ ನೀಡಿದರು.</p>.<p>ಈ ಸಂದರ್ಭದಲ್ಲಿ ಮನವಿ ಸ್ವೀಕರಿಸಿದ ಗೋವಾ ರಾಜ್ಯದ ಕಾಣಕೋಣದ ಡೆಪ್ಯುಟಿ ಕಲೆಕ್ಟರ್ ರಾಜೇಶ ಪ್ರಭು, ‘ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿಯ (ಎಂ.ಸಿ.ಐ.ಆರ್) ನಿಯಮದ ಪ್ರಕಾರ ಗಡಿಯಲ್ಲಿ ನಿರ್ಬಂಧ ಹೇರಲಾಗಿದೆ. ಇದರಲ್ಲಿ ತಾರತಮ್ಯ ಮಾಡುತ್ತಿಲ್ಲ’ಎಂದರು.</p>.<p>ಹೊರ ರಾಜ್ಯಗಳಿಂದ ತನ್ನ ರಾಜ್ಯಕ್ಕೆ ಬರುವ ಪ್ರಯಾಣಿಕರು ಕಡ್ಡಾಯವಾಗಿ ಕೋವಿಡ್ ನೆಗೆಟಿವ್ ಪರೀಕ್ಷಾ ವರದಿ ತರಬೇಕು. ಅದಾಗದಿದ್ದರೆ, ಗೋವಾದಲ್ಲಿ 14 ದಿನಗಳ ಹೋಂ ಕ್ವಾರಂಟೈನ್ ಆಗಬೇಕು. ಇಲ್ಲದಿದ್ದರೆ, 2000 ರೂಪಾಯಿ ಪಾವತಿಸಿ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಬೇಕು ಎಂದು ನಿಯಮ ಹೇರಿದೆ.</p>.<p>ಕೇಂದ್ರ ಸರ್ಕಾರವು ಅಂತರರಾಜ್ಯ ಗಡಿಗಳನ್ನು ಮುಕ್ತವಾಗಿಡುವಂತೆ ಸೂಚಿಸಿದ್ದರೂ ಗೋವಾ ಪಾಲಿಸದಿರುವುದು ಹೊರ ರಾಜ್ಯಗಳ ಜನರಿಗೆ ಸಮಸ್ಯೆ ತಂದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>