<p><strong>ಶಿರಸಿ</strong>: ಉತ್ತರ ಕನ್ನಡ ಜಿಲ್ಲೆಯಲ್ಲಿ ಜೀವವೈವಿಧ್ಯ ಸಂರಕ್ಷಣೆ, ಜಾಗೃತಿಗೆ ಕೈಗೊಂಡಿರುವ ಕಾರ್ಯಗಳನ್ನು ಅವಲೋಕಿಸಿ ತರಬೇತಿ ಪಡೆಯಲು ಗೋವಾದ 35 ಗ್ರಾಮ ಪಂಚಾಯ್ತಿಗಳ ಪ್ರತಿನಿಧಿಗಳ ತಂಡ ನಗರಕ್ಕೆ ಭೇಟಿ ನೀಡಿದೆ.</p>.<p>ಮೂರು ದಿನಗಳ ಅಧ್ಯಯನ ಪ್ರವಾಸಕ್ಕೆ ಗೋವಾದ ತಂಡ ಆಗಮಿಸಿದ್ದು ಭಾನುವಾರ ಇಲ್ಲಿನ ಕದಂಬ ಸೌಹಾರ್ಧ ಮಾರ್ಕೆಟಿಂಗ್ ಸಂಸ್ಥೆಯಲ್ಲಿ ತರಬೇತಿ ಶಿಬಿರಕ್ಕೆ ರಾಜ್ಯ ಜೀವ ವೈವಿಧ್ಯ ಮಂಡಳಿ ಅಧ್ಯಕ್ಷ ಅನಂತ ಹೆಗಡೆ ಅಶೀಸರ ಚಾಲನೆ ನೀಡಿದರು.</p>.<p>‘ಗ್ರಾಮದ ಅಂಚಿನ ಅರಣ್ಯಗಳ ಸಂರಕ್ಷಣೆಗೆ ಹೆಚ್ಚು ಗಮನಹರಿಸುವ ಅಗತ್ಯವಿದೆ. ಕೃಷಿ, ತೋಟಗಾರಿಕೆ, ಜಾನುವಾರು ತಳಿ ವೈವಿಧ್ಯ, ಕೆರೆಗಳ ಸಂರಕ್ಷಣೆಗೆ ಮುತುವರ್ಜಿ ವಹಿಸಬೇಕು’ ಎಂದು ಅವರು ಸಲಹೆ ನೀಡಿದರು.</p>.<p>ಅಧ್ಯಯನ ತಂಡದಲ್ಲಿ ಪಾಲ್ಗೊಂಡಿರುವ ಗೋವಾದ ವಿವಿಧ ಗ್ರಾಮ ಪಂಚಾಯ್ತಿಗಳ ಅಧ್ಯಕ್ಷರು, ಪಿಡಿಓಗಳ ಜತೆ ಸಂವಾದ ನಡೆಸಲಾಯಿತು.</p>.<p>ಕದಂಬ ಸೌಹಾರ್ಧ ಮಾರ್ಕೆಟಿಂಗ್ ಸಂಸ್ಥೆಯ ಅಧಿಕಾರಿ ವಿಶ್ವೇಶ್ವರ ಭಟ್ ಅವರು ರೈತರ ಉತ್ಪನ್ನಗಳ ಮೌಲ್ಯ ವರ್ಧನೆ, ಗ್ರಾಮೀಣ ಮಹಿಳಾ ಶಕ್ತಿ ಸಬಲೀಕರಣ, ಸಹಕಾರ ಆಂದೋಲನದ ಕುರಿತು ಮಾಹಿತಿ ನೀಡಿದರು.</p>.<p>ಗೋವಾ ಜೀವ ವೈವಿಧ್ಯ ಮಂಡಳಿಯ ಸದಸ್ಯ ಕಾರ್ಯದರ್ಶಿ ಡಾ.ಪ್ರದೀಪ, ಅರಣ್ಯ ವಿಜ್ಞಾನಿ ಡಾ.ಜವರೇಗೌಡ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿರಸಿ</strong>: ಉತ್ತರ ಕನ್ನಡ ಜಿಲ್ಲೆಯಲ್ಲಿ ಜೀವವೈವಿಧ್ಯ ಸಂರಕ್ಷಣೆ, ಜಾಗೃತಿಗೆ ಕೈಗೊಂಡಿರುವ ಕಾರ್ಯಗಳನ್ನು ಅವಲೋಕಿಸಿ ತರಬೇತಿ ಪಡೆಯಲು ಗೋವಾದ 35 ಗ್ರಾಮ ಪಂಚಾಯ್ತಿಗಳ ಪ್ರತಿನಿಧಿಗಳ ತಂಡ ನಗರಕ್ಕೆ ಭೇಟಿ ನೀಡಿದೆ.</p>.<p>ಮೂರು ದಿನಗಳ ಅಧ್ಯಯನ ಪ್ರವಾಸಕ್ಕೆ ಗೋವಾದ ತಂಡ ಆಗಮಿಸಿದ್ದು ಭಾನುವಾರ ಇಲ್ಲಿನ ಕದಂಬ ಸೌಹಾರ್ಧ ಮಾರ್ಕೆಟಿಂಗ್ ಸಂಸ್ಥೆಯಲ್ಲಿ ತರಬೇತಿ ಶಿಬಿರಕ್ಕೆ ರಾಜ್ಯ ಜೀವ ವೈವಿಧ್ಯ ಮಂಡಳಿ ಅಧ್ಯಕ್ಷ ಅನಂತ ಹೆಗಡೆ ಅಶೀಸರ ಚಾಲನೆ ನೀಡಿದರು.</p>.<p>‘ಗ್ರಾಮದ ಅಂಚಿನ ಅರಣ್ಯಗಳ ಸಂರಕ್ಷಣೆಗೆ ಹೆಚ್ಚು ಗಮನಹರಿಸುವ ಅಗತ್ಯವಿದೆ. ಕೃಷಿ, ತೋಟಗಾರಿಕೆ, ಜಾನುವಾರು ತಳಿ ವೈವಿಧ್ಯ, ಕೆರೆಗಳ ಸಂರಕ್ಷಣೆಗೆ ಮುತುವರ್ಜಿ ವಹಿಸಬೇಕು’ ಎಂದು ಅವರು ಸಲಹೆ ನೀಡಿದರು.</p>.<p>ಅಧ್ಯಯನ ತಂಡದಲ್ಲಿ ಪಾಲ್ಗೊಂಡಿರುವ ಗೋವಾದ ವಿವಿಧ ಗ್ರಾಮ ಪಂಚಾಯ್ತಿಗಳ ಅಧ್ಯಕ್ಷರು, ಪಿಡಿಓಗಳ ಜತೆ ಸಂವಾದ ನಡೆಸಲಾಯಿತು.</p>.<p>ಕದಂಬ ಸೌಹಾರ್ಧ ಮಾರ್ಕೆಟಿಂಗ್ ಸಂಸ್ಥೆಯ ಅಧಿಕಾರಿ ವಿಶ್ವೇಶ್ವರ ಭಟ್ ಅವರು ರೈತರ ಉತ್ಪನ್ನಗಳ ಮೌಲ್ಯ ವರ್ಧನೆ, ಗ್ರಾಮೀಣ ಮಹಿಳಾ ಶಕ್ತಿ ಸಬಲೀಕರಣ, ಸಹಕಾರ ಆಂದೋಲನದ ಕುರಿತು ಮಾಹಿತಿ ನೀಡಿದರು.</p>.<p>ಗೋವಾ ಜೀವ ವೈವಿಧ್ಯ ಮಂಡಳಿಯ ಸದಸ್ಯ ಕಾರ್ಯದರ್ಶಿ ಡಾ.ಪ್ರದೀಪ, ಅರಣ್ಯ ವಿಜ್ಞಾನಿ ಡಾ.ಜವರೇಗೌಡ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>