ಕಾರ್ಯಕ್ರಮದ ಸಂಚಾಲಕ ನರಸಿಂಹ ಹೆಗಡೆ ಬಾಳೆಗದ್ದೆ, ಸ್ಮರಣ ಸಂಚಿಕೆಯ ಸಂಪಾದಕಿ ರೋಹಿಣಿ ಭಟ್, ಗೋಕರ್ಣ ಮಂಡಳದ ಅಧ್ಯಕ್ಷ ಡಾ.ಎಂ.ನಾರಾಯಣ ಭಟ್ಟ, ಖಜಾಂಚಿ ಲಲಿತಾ ಹೆಗಡೆ, ದೆಹಲಿ ಕರ್ನಾಟಕ ಸಂಘದ ಕಾರ್ಯದರ್ಶಿ ಸಿ.ಎಂ. ನಾಗರಾಜ್ ಇದ್ದರು. ರಾಮಚಂದ್ರ ಭಟ್ಟ ಸಭೆಯ ಅಧ್ಯಕ್ಷತೆ ವಹಿಸಿದ್ದರು. ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರನ್ನು ಸನ್ಮಾನಿಸಲಾಯಿತು. ಎಸ್ಸೆಸ್ಸೆಲ್ಸಿ, ಪಿಯುಸಿಯಲ್ಲಿ ಸಾಧನೆ ಮಾಡಿದ 25 ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಿಸಲಾಯಿತು. ಶಾಲಿನಿ ಪ್ರಶಾಂತ, ಪೂರ್ಣಿಮಾ ಹೆಗಡೆ ನಿರೂಪಿಸಿದರು. ಸತೀಶ ಹೆಗಡೆ ವಂದಿಸಿದರು.