ಇದೇ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ದೇವಸ್ಥಾನಕ್ಕೆ ಭೇಟಿ ನೀಡಿ, ಮಹಾಬಲೇಶ್ವರನಿಗೆ ಪೂಜೆ ಸಲ್ಲಿಸಿದರು. ಸಮಿತಿಯ ಇತರ ಸದಸ್ಯರೊಂದಿಗೆ ಸ್ವಲ್ಪಹೊತ್ತು ಚರ್ಚೆ ನಡೆಸಿದರು. ಸಮಿತಿಯ ಸದಸ್ಯರಾದ ಮಹಾಬಲ ಉಪಾಧ್ಯ, ದತ್ತಾತ್ರೇಯ ಹಿರೇಗಂಗೆ, ಪರಮೇಶ್ವರ ಮಾರ್ಕಾಂಡೆ, ಕಂದಾಯ ಅಧಿಕಾರಿ ಕೆ.ಎಸ್.ಗೊಂಡ, ಪಿ.ಎಸ್.ಐ ನವೀನ್ ನಾಯ್ಕ ಇದ್ದರು.