ದೇವರಾಜ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒವೈಸ್ ಸಬೀರ್ ಹುಸೇನ್ ಎಂಬವರು ವಿಚಾರಣಾ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಅದರ ಆಧಾರದಲ್ಲಿ ದೇವರಾಜ ಮತ್ತು ಇತರ ಸಿಬ್ಬಂದಿ ವಿರುದ್ಧ ವಿಚಾರಣೆ ಆರಂಭವಾಗಿತ್ತು. ಈಗ ಒವೈಸ್ ಅವರಿಗೂ ಸುಪ್ರೀಂ ಕೋರ್ಟ್ ನೋಟಿಸ್ ನೀಡಿದೆ. ಸರ್ಕಾರಿ ನೌಕರರು ತಮ್ಮ ಕರ್ತವ್ಯ ನಿರ್ವಹಣೆಯ ಸಂದರ್ಭದಲ್ಲಿ ಅಪರಾಧ ಎಸಗಿದ್ದಾರೆ ಎಂಬ ಆರೋಪ ಬಂದರೆ ಕಾನೂನು ಕ್ರಮ ಕೈಗೊಳ್ಳುವ ಮೊದಲು ಸೂಕ್ತ ಪ್ರಾಧಿಕಾರದ ಅನುಮತಿ ಪಡೆದುಕೊಳ್ಳಬೇಕು. ಆದರೆ ದೂರು ದಾಖಲಿಸುವ ಮುನ್ನ ಇಂತಹ ಅನುಮತಿ ಪಡೆದುಕೊಂಡಿಲ್ಲ ಎಂಬ ಅಂಶವನ್ನು ವಿಚಾರಣಾ ನ್ಯಾಯಾಲಯ ಮತ್ತು ಕರ್ನಾಟಕ ಹೈಕೋರ್ಟ್ ನಿರ್ಲಕ್ಷಿಸಿದೆ ಎಂದು ದೇವರಾಜ ಪರ ವಕೀಲರು ವಾದಿಸಿದರು.