ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಜಿಲ್ಲೆಯಲ್ಲಿ ನಮ್ಮ ಸಮುದಾಯದ 50 ಸಾವಿರಕ್ಕಿಂತ ಹೆಚ್ಚಿನ ಜನರು ವಾಸಿಸುತ್ತಿದ್ದಾರೆ. ಆದರೆ, ಯಾರಿಗೂ ಸ್ವಂತ ಮನೆಗಳಿಲ್ಲ. ಸೂಕ್ತ ಉದ್ಯೋಗವಿಲ್ಲ. ಹಾಗಾಗಿ ಆರ್ಥಿಕ, ಸಾಮಾಜಿಕ, ರಾಜಕೀಯ ಕ್ಷೇತ್ರಗಳಲ್ಲಿ ಬೆಳವಣಿಗೆ ಹೊಂದಲು ಸಾಧ್ಯವಾಗುತ್ತಿಲ್ಲ. ರಾಜ್ಯದಲ್ಲಿ ಪ್ರವರ್ಗ 1ರಲ್ಲಿ ಹಾಗೂ ರಾಷ್ಟ್ರಮಟ್ಟದಲ್ಲಿ ಇತರ ಹಿಂದುಳಿದ ಜಾತಿ (ಒ.ಬಿ.ಸಿ) ಎಂದು ಗುರುತಿಸಲಾಗಿದೆ. ಆದರೆ, ಇದರಿಂದ ಸಮಾಜಕ್ಕೆಯಾವುದೇ ಲಾಭವಾಗುತ್ತಿಲ್ಲ’ ಎಂದು ಅವರು ದೂರಿದರು.