ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಿವೃತ್ತ ಕರ್ನಲ್ ಎಂ.ಬಿ. ರವೀಂದ್ರನಾಥ್ ನಿಧನ

Last Updated 8 ಏಪ್ರಿಲ್ 2018, 19:40 IST
ಅಕ್ಷರ ಗಾತ್ರ

ಮಲೇಬೆನ್ನೂರು: ಸಮೀಪದ ಹೊಳೆಸಿರಿಗೆರೆ ನಿವಾಸಿ, ನಿವೃತ್ತ ಕರ್ನಲ್ ಎಂ.ಬಿ. ರವೀಂದ್ರನಾಥ್ (59) ಭಾನುವಾರ ಬೆಂಗಳೂರಿನಲ್ಲಿ ಅನಾರೋಗ್ಯದಿಂದ ನಿಧನರಾದರು.

ಅವರಿಗೆ ಪತ್ನಿ, ಇಬ್ಬರು ಪುತ್ರಿಯರು ಇದ್ದಾರೆ. ಕಾರ್ಗಿಲ್ ಯುದ್ಧದಲ್ಲಿ ಹೋರಾಡಿದ್ದ ರವೀಂದ್ರನಾಥ್‌ ಅವರಿಗೆ ‘ವೀರಚಕ್ರ’ ಪ್ರಶಸ್ತಿ ಪುರಸ್ಕಾರಕ್ಕೆ ಭಾಜನರಾಗಿದ್ದರು.

ನಿವೃತ್ತಿಯ ನಂತರ ಬೆಂಗಳೂರಿನಲ್ಲಿ ಮಾಗೋಡ ಲೇಸರ್ ಮಷಿನಿಂಗ್ ಸೆಂಟರ್ ನಡೆಸುತ್ತಿದ್ದರು.

ಅಂತ್ಯಕ್ರಿಯೆಯನ್ನು ಸ್ವಗ್ರಾಮದಲ್ಲಿ ಸೋಮವಾರ ನೆರವೇರಿಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಬರಗೂರು ಪತ್ನಿ ರಾಜಲಕ್ಷ್ಮಿ ನಿಧನ

ಬೆಂಗಳೂರು: ಸಾಹಿತಿ ಪ್ರೊ.ಬರಗೂರು ರಾಮಚಂದ್ರಪ್ಪ ಅವರ ಪತ್ನಿ ಎಸ್‌.ರಾಜಲಕ್ಷ್ಮಿ (66) ಅನಾರೋಗ್ಯದಿಂದ ಭಾನುವಾರ ನಿಧನರಾದರು.

ಅವರಿಗೆ ಪತಿ, ಇಬ್ಬರು ಪುತ್ರರು ಇದ್ದಾರೆ. ತುಮಕೂರು ಜಿಲ್ಲೆಯ ಮಧುಗಿರಿ ತಾಲ್ಲೂಕಿನ ಸಿದ್ಧನಹಳ್ಳಿಯವರಾದ ಅವರು, ಕನ್ನಡ ಸಾಹಿತ್ಯದ ಮೇಲೆ ಅಪಾರ ಆಸಕ್ತಿ ಹೊಂದಿದ್ದರು. ಬರಗೂರರೊಂದಿಗೆ ಅಂತರ್ಜಾತಿ ವಿವಾಹವಾಗಿದ್ದರು. ಅವರ ಸಾಹಿತ್ಯ ಹಾಗೂ ಸಾಮಾಜಿಕ ಕಳಕಳಿಗೆ ಒತ್ತಾಸೆಯಾಗಿದ್ದರು.

‘ನಟ ರಾಜ್‌ಕುಮಾರ್‌ ಪ್ರಭಾವದಿಂದ ರಾಜಲಕ್ಷ್ಮಿ ಅವರು ತಮ್ಮ ನೇತ್ರಗಳನ್ನು ದಾನ ಮಾಡಲು ನಿರ್ಧರಿಸಿದ್ದರು. ಎರಡು ಕಣ್ಣುಗಳನ್ನು ಲಯನ್ಸ್‌ ಇಂಟರ್‌ನ್ಯಾಷನಲ್‌ ನೇತ್ರ ಭಂಡಾರ ಸಂಸ್ಥೆಗೆ ದಾನ ಮಾಡಲಾಯಿತು’ ಎಂದು ಕುಟುಂಬದ ಸದಸ್ಯರು ತಿಳಿಸಿದರು.

ಸೋಮವಾರ ಮಧ್ಯಾಹ್ನ 2 ಗಂಟೆಗೆ ಬನಶಂಕರಿ ವಿದ್ಯುತ್‌ ಚಿತಾಗಾರದಲ್ಲಿ ಅಂತ್ಯಸಂಸ್ಕಾರ ನೆರವೇರಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT