ರಾಜ್ಯ ಸರ್ಕಾರದ ಸಾಧನೆಗಳನ್ನು ಮುಂದಿಟ್ಟ ಅವರು, 'ರಾಜ್ಯದಲ್ಲೇ ಹೆಚ್ಚು ಪ್ರವಾಸಿ ತಾಣಗಳನ್ನು ಹೊಂದಿರುವ ಹೆಗ್ಗಳಿಕೆ ಉತ್ತರ ಕನ್ನಡದ್ದಾಗಿದೆ. ಮುರ್ಡೇಶ್ವರ, ಅಪ್ಸರಕೊಂಡ, ಯಾಣ, ಓಂ ಬೀಚ್, ಸಿದ್ದಾಪುರ ಕಲ್ಲಿನ ಸೇತುವೆ, ಮಾಗೋಡ, ಸಾತೊಡ್ಡಿ, ಶಿರಲೆ, ಉಂಚಳ್ಳಿ ಮುಂತಾದ ಜಲಪಾತಗಳನ್ನು ಅಭಿವೃದ್ಧಿ ಮಾಡಲಾಗುವುದು' ಎಂದು ತಿಳಿಸಿದರು.