ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಆಧುನಿಕತೆಯಿಂದ ಜಾನಪದ ನಾಶ‘

ತಾಲ್ಲೂಕು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಅಧ್ಯಕ್ಷ ಎಂ.ಬಿ.ಕುಮಾರ್ ಆತಂಕ
Last Updated 17 ಮಾರ್ಚ್ 2018, 8:53 IST
ಅಕ್ಷರ ಗಾತ್ರ

ಮಳೂರುಪಟ್ಟಣ (ಚನ್ನಪಟ್ಟಣ): ಆಧುನಿಕತೆಯ ಭರಾಟೆಯಲ್ಲಿ ಜಾನಪದ ನಶಿಸಿ ಹೋಗುತ್ತಿದ್ದು, ಅದನ್ನು ಉಳಿಸಿ ಬೆಳೆಸುವ ಜವಾಬ್ದಾರಿ ಎಲ್ಲರ ಮೇಲಿದೆ ಎಂದು ತಾಲ್ಲೂಕು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಅಧ್ಯಕ್ಷ ಎಂ.ಬಿ.ಕುಮಾರ್ ಹೇಳಿದರು.

ಗ್ರಾಮದಲ್ಲಿ ನುಲಿಯ ಚಂದಯ್ಯ ಕೊರಮರ ಸಾಮಾಜಿಕ ಮತ್ತು ಸಾಂಸ್ಕೃತಿಕ ಕಲಾ ಟ್ರಸ್ಟ್ ವತಿಯಿಂದ ಶುಕ್ರವಾರ ಹಮ್ಮಿಕೊಂಡಿದ್ದ ‘4ನೇ ವರ್ಷದ ಜನಪದ ಕಲಾ ಪ್ರದರ್ಶನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ಮತ್ತು ಶಾಲಾ ಮಕ್ಕಳಿಗೆ ಲೇಖನಿ ಸಾಮಗ್ರಿಗಳ ವಿತರಣೆ’ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಡೊಳ್ಳು ಕುಣಿತ, ವೀರಗಾಸೆ, ಸೋಬಾನೆ ಪದ, ಚಿಲಿಪಿಲಿ ಗೊಂಬೆ ಕುಣಿತ, ಪೂಜಾ ಕುಣಿತ ಸೇರಿದಂತೆ ವಿವಿಧ ಜನಪದ ಕಲೆಗಳು ನಾಶದ ಹಾದಿ ಹಿಡಿದಿವೆ. ಇಂತಹ ಸಮಯದಲ್ಲಿ ಸಂಘ ಸಂಸ್ಥೆಗಳು ಅವುಗಳನ್ನು ಜನಸಾಮಾನ್ಯರಿಗೆ ಮುಟ್ಟಿಸುವಲ್ಲಿ ಯಶಸ್ಸು ಕಾಣುತ್ತಿವೆ. ಇಂತಹ ಪ್ರಯತ್ನಗಳು ಆಗುತ್ತಿರುವುದು ನಿಜಕ್ಕೂ ಶ್ಲಾಘನೀಯ ಎಂದರು.

ನಿವೃತ್ತ ಪ್ರಾಧ್ಯಾಪಕ ಎಂ.ಡಿ. ಚಾಮರಾಜು ಮಾತನಾಡಿ, ಪ್ರಾಥಮಿಕ ಹಂತದಲ್ಲಿ ಮಕ್ಕಳಿಗೆ ಜನಪದ ಕಲೆಗಳ ಬಗ್ಗೆ ಅರಿವು ಮೂಡಿಸುವುದು ಮತ್ತು ಅವುಗಳನ್ನು ಪ್ರೋತ್ಸಾಹಿಸುವುದರಿಂದ ಜನಪದ ಕಲೆಗಳು ಬೆಳೆಯಲು ಸಹಕಾರಿಯಾಗುತ್ತವೆ. ಜನಪದವನ್ನು ಪಠ್ಯದಲ್ಲಿ ಸೇರಿಸುವ ಅವಶ್ಯಕತೆ ಇದೆ ಎಂದರು.

ಉಪನ್ಯಾಸಕ ಜಯರಾಮು ಮಾತನಾಡಿ, ಟ್ರಸ್ಟ್‌ನ ವತಿಯಿಂದ ಮಕ್ಕಳಿಗೆ ವಿತರಿಸಿರುವ ಲೇಖನ ಸಾಮಗ್ರಿಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದರು.

ಮಳೂರುಪಟ್ಟಣ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಶಾಂತಮ್ಮ, ಹಾಲು ಉತ್ಪಾದಕರ ಸಹಕಾರ ಸಂಘದ ಕಾರ್ಯದರ್ಶಿ ಕುಮಾರ್, ಎಸ್.ಡಿ.ಎಂ.ಸಿ. ಅಧ್ಯಕ್ಷ ಮುತ್ತುರಾಜ್, ಪ್ರೀತಿ ಗೆಳೆಯರ ಬಳಗದ ಅಧ್ಯಕ್ಷ ಶರತ್, ಯುವ ಮುಖಂಡರಾದ ಮುತ್ತುರಾಜ್, ಟ್ರಸ್ಟ್ ಅಧ್ಯಕ್ಷ ಶ್ರೀನಿವಾಸ್, ಕಾರ್ಯದರ್ಶಿ ಗೋವಿಂದರಾಜು, ಶಿಕ್ಷಕರಾದ ರಂಗನಾಥ್, ಕಲ್ಪನ, ಸವಿತಾ, ಪದ್ಮಮ್ಮ, ಮಂಜುನಾಥ್ ಭಾಗವಹಿಸಿದ್ದರು.

ನಂತರ ಗ್ರಾಮದ ಪ್ರಮುಖ ಬೀದಿಗಳಲ್ಲಿ ಡೊಳ್ಳು ಕುಣಿತ, ವೀರಗಾಸೆ ಕುಣಿತ, ಪೂಜೆ ಕುಣಿತ, ತಮಟೆ, ಕಲಾತಂಡಗಳ ಪ್ರದರ್ಶನ, ಸೋಬಾನೆ ಪದ, ಜನಪದ ಗೀತೆಗಳನ್ನು ಹಾಡಲಾಯಿತು. ಶಾಲಾ ಮಕ್ಕಳು ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಟ್ಟರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT