‘ನನ್ನ ವಾರ್ಡ್ನಲ್ಲಿ ಮೂಲ ಸೌಕರ್ಯಗಳ ಕೊರತೆಯಿದೆ. ನಿತ್ಯ ಕುಡಿಯುವ ನೀರು ಪೂರೈಕೆಯಾಗುತ್ತಿಲ್ಲ. ಬೀದಿದೀಪಗಳು ಹಾಳಾಗಿ ತಿಂಗಳು ಕಳೆದಿದೆ. ಈ ಬಗ್ಗೆ ಗಮನ ಸೆಳೆದರೂ ಅಧ್ಯಕ್ಷರು ಸ್ಪಂದಿಸುತ್ತಿಲ್ಲ. ಬನವಾಸಿಯ ಬೀದಿಯಲ್ಲಿ ಅಶುದ್ಧತೆ ತಾಂಡವವಾಡುತ್ತಿದೆ. ಸ್ವಚ್ಛ ಭಾರತ ಅಭಿಯಾನ ಇಲ್ಲಿ ಕನಸಾಗಿದೆ. ಹೀಗಾಗಿ, ಜನಪ್ರತಿನಿಧಿಯಾಗಿದ್ದರೂ ಸಹ, ಪ್ರತಿಭಟನೆ ನಡೆಸುವ ಅನಿವಾರ್ಯತೆ ಬಂತು’ ಎಂದು ಅವರು ಹೇಳಿದರು. ಅಧ್ಯಕ್ಷರು ಪಕ್ಷ ರಾಜಕಾರಣ ಮಾಡುವುದನ್ನು ಬಿಟ್ಟು, ಅಭಿವೃದ್ಧಿ ಆಧಾರಿತ ರಾಜಕಾರಣ ಮಾಡಬೇಕು ಎಂದು ಒತ್ತಾಯಿಸಿದರು.