ಲಕ್ಷ್ಮಣ ಶಿವರಾಯ ಮಾನೆ (63) ಮೃತರು. ಗ್ರಾಮ ಪಂಚಾಯಿತಿಯ ಮತಗಟ್ಟೆಯಲ್ಲಿ ಬೆಳಿಗ್ಗೆ ತಮ್ಮ ಹಕ್ಕು ಚಲಾಯಿಸಿದ್ದ ಅವರು ಮನೆಗೆ ಮರಳಿ 9.30ರ ಸುಮಾರಿಗೆ ಉಪಾಹಾರ ಸೇವಿಸಿದ್ದರು. ಆಗ ಅವರಿಗೆ ಎದೆ ನೋವು ಕಾಣಿಸಿಕೊಂಡಿತ್ತು. ಮನೆಯವರು ಕೂಡಲೇ ಹಳಿಯಾಳದ ಆಸ್ಪತ್ರೆಗೆ ಕರೆದುಕೊಂಡು ಹೋದರು. ಆದರೆ, ಮಾರ್ಗ ಮಧ್ಯದಲ್ಲಿ ತೀವ್ರ ಹ್ರದಯಾಘಾತವಾಗಿ ಮೃತಪಟ್ಟರು ಎಂದು ಪರಿಚಯಸ್ಥರು ತಿಳಿಸಿದ್ದಾರೆ.