ಮಂಗಳೂರು: ಅತಿಥಿ ಶಿಕ್ಷಕರು ಕೋವಿಡ್ ಸಂಕಷ್ಟದಿಂದಾಗಿ ಉದ್ಯೋಗ ಇಲ್ಲದೇ ತತ್ತರಿಸುವಂತಾಗಿದೆ. ಕೂಡಲೇ ಅತಿಥಿ ಶಿಕ್ಷಕರನ್ನು ಕಾಯಂ ಮಾಡಲು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ, ಅತಿಥಿ ಶಿಕ್ಷಕರು ಇಲ್ಲಿನ ಮಿನಿ ವಿಧಾನಸೌಧದ ಬಳಿ ಸೋಮವಾರ ಪ್ರತಿಭಟನೆ ನಡೆಸಿದರು.
ಸಮಾಜ ಕಲ್ಯಾಣ ಇಲಾಖೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಶಿಕ್ಷಕರ ನೇಮಕದಲ್ಲಿ ಅರೆಕಾಲಿಕ ಶಿಕ್ಷಕರು, ಅತಿಥಿ ಶಿಕ್ಷಕರಿಗೆ ಆದ್ಯತೆ ನೀಡುವ ರೀತಿಯಲ್ಲಿ ಶಾಲಾ ಶಿಕ್ಷಕರ ನೇಮಕಾತಿಯಲ್ಲೂ ನಮಗೆ ಆದ್ಯತೆ ನೀಡಬೇಕು ಎಂದು ಒತ್ತಾಯಿಸಿದರು.
ಕೋವಿಡ್ ವಿಶೇಷ ಪ್ಯಾಕೇಜ್ ನೀಡಬೇಕು. 12 ತಿಂಗಳವೇತನ ಪಾವತಿಸಬೇಕು. ಉದ್ಯೋಗ ಭದ್ರತೆ, ಇಎಸ್ಐ, ಇಪಿಎಫ್ ಸೌಲಭ್ಯ ನೀಡಬೇಕು ಎಂದು ಆಗ್ರಹಿಸಿದರು.