ತಾಲ್ಲೂಕಿನ ಜನರು ಎದುರಿಸುತ್ತಿರುವ ಈ ಸಮಸ್ಯೆಯ ಬಗ್ಗೆ ಆರೋಗ್ಯ ಇಲಾಖೆಯು ತಕ್ಷಣ ಸ್ಪಂದಿಸಬೇಕು. ಪ್ರಸೂತಿ ತಜ್ಞರನ್ನು ನೇಮಿಸಬೇಕು. ಆಸ್ಪತ್ರೆಯಲ್ಲಿ ಫಿಜಿಸಿಯನ್ (ಮೆಡಿಸಿನ್), ಚರ್ಮರೋಗ ತಜ್ಞರು, ಕಣ್ಣಿನ ತಜ್ಞರು, ದಂತವೈದ್ಯರ ಕೊರತೆ ಇದೆ. ಇದನ್ನೂ ಪರಿಹರಿಸಬೇಕು. ಈ ನಿಟ್ಟಿನಲ್ಲಿ ಜನಪ್ರತಿನಿಧಿಗಳು ಮುತುವರ್ಜಿ ವಹಿಸಬೇಕು ಎಂಬುದು ಸಾರ್ವಜನಿಕರ ಒತ್ತಾಯವಾಗಿದೆ.