ಜಲಾಶಯದ ಮತ್ತೊಂದು ತುದಿಯಲ್ಲಿರುವ ವ್ಯೂ ಪಾಯಿಂಟ್, ಗಿಡಗಂಟಿಗಳಿಂದಲೇ ಮುಚ್ಚಿ ಹೋಗಿದೆ.ಯಾವುದೇ ಮೂಲಸೌಕರ್ಯಗಳಿಲ್ಲ. ಪ್ಲಾಸ್ಟಿಕ್ ಬಾಟಲಿಗಳು, ತಿಂಡಿ ಪೊಟ್ಟಣಗಳನ್ನು ಹಾಕಲು ಕಸದ ಬುಟ್ಟಿಯೂ ಇಲ್ಲ. ಎಲ್ಲೆಂದರಲ್ಲಿ ಕಸಗಳನ್ನು ಬಿಸಾಡಲಾಗುತ್ತಿದೆ. ಹಾಗಾಗಿ ಪರಿಸರಕ್ಕೂ ಹಾನಿಯಾಗುತ್ತಿದೆ.ಹಾಗಾಗಿ ಈ ಸ್ಥಳವನ್ನು ಮತ್ತಷ್ಟು ಸುಂದರವಾಗಿಸಲು ಕಿರು ನೀರಾವರಿ ಇಲಾಖೆ ಗಮನ ಹರಿಸಬೇಕು ಎನ್ನುವುದು ಅವರ ಒತ್ತಾಯವಾಗಿದೆ.